ಬ್ರೇಕಿಂಗ್ ನ್ಯೂಸ್
26-06-23 10:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಜೂನ್ 29ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಗೋವುಗಳ ಹತ್ಯೆ ನಡೆಯಬಾರದು. ಅಕ್ರಮ ಗೋಸಾಗಣೆ, ಕುರ್ಬಾನಿ ಹೆಸರಲ್ಲಿ ಗೋವುಗಳನ್ನು ಬಲಿ ಕೊಡುವುದನ್ನು ಬಜರಂಗದಳ ಸಹಿಸಲ್ಲ. ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್. ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕುರ್ಬಾನಿ ಹೆಸರಲ್ಲಿ ಸಾವಿರಾರು ಗೋವುಗಳ ಹತ್ಯೆ ಮಾಡುವ ಸುಳಿವು ಸಿಕ್ಕಿದೆ. ರಾಜ್ಯ ಸರಕಾರ ಮತ್ತು ಆಯಾ ಜಿಲ್ಲಾಡಳಿತ ಈ ಬಗ್ಗೆ ಜಾಗ್ರತೆ ವಹಿಸಬೇಕು. ಅಕ್ರಮ ಸಾಗಣೆ ಹತ್ತಿಕ್ಕುವುದಕ್ಕಾಗಿ ಎಲ್ಲ ಕಡೆಗಳಲ್ಲೂ ಜೂನ್ 30ರ ವರೆಗೆ ಚೆಕ್ ಪೋಸ್ಟ್ ಹಾಕಬೇಕು. ಗೋಸಾಗಾಟ ತಡೆಯಲು ವಿಶೇಷ ಪೊಲೀಸ್ ತಂಡ ರಚಿಸಬೇಕು ಎಂದು ಆಗ್ರಹಿಸಿದರು.
ಕುರಿ, ಕೋಳಿಯನ್ನು ಬಲಿ ಕೊಡಲಿ. ಆದರೆ, ಹಿಂದುಗಳು ಪೂಜ್ಯ ಭಾವದಲ್ಲಿ ನಂಬುವ ಗೋವನ್ನು ಕಡಿಯುವುದನ್ನು ನಾವು ಸಹಿಸಲ್ಲ. ಬಕ್ರೀದ್ ಸಂದರ್ಭದಲ್ಲಿ ರಾಜ್ಯ ಸರಕಾರ ಗೋಹತ್ಯೆಗೆ ಅವಕಾಶ ಕೊಟ್ಟರೆ, ಅದನ್ನು ತಡೆಯುವುದಕ್ಕೆ ಬಜರಂಗದಳಕ್ಕೆ ಗೊತ್ತಿದೆ. ಆಮೂಲಕ ಆಗಬಹುದಾದ ಅಹಿತಕರ ಘಟನೆಗಳಿಗೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದವರು ಪರೋಕ್ಷ ಎಚ್ಚರಿಕೆ ನೀಡಿದರು. ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ ಅವರಿಗೆ ಕನಸಿನಲ್ಲೂ ಬಜರಂಗದಳವೇ ಕನವರಿಕೆ ಆಗುತ್ತದೆ. ಸಚಿವ ಸ್ಥಾನದಲ್ಲಿದ್ದು ಸಂಘಟನೆ ಬಗ್ಗೆ ಹಗುರವಾಗಿ ಮಾತನಾಡದೇ ಇರುವುದು ಒಳ್ಳೆಯದು. ಸೂಕ್ತ ಸಂದರ್ಭದಲ್ಲಿ ಅವರಿಗೆ ಬಜರಂಗಳ ತಕ್ಕ ಉತ್ತರ ನೀಡಲಿದೆ ಎಂದರು.
ಮಂಗಳೂರಿನಲ್ಲಿ ಆಂಯಿ ಕಮ್ಯುನಲ್ ವಿಂಗ್ ರಚಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸುನಿಲ್, ಅಂಥ ವಿಂಗ್ ರಚಿಸುವುದಕ್ಕೆ ಸಂತೋಷ ಇದೆ. ಆದರೆ, ಈ ವಿಂಗ್ ಮೂಲಕ ಗೋಹತ್ಯೆ, ಲವ್ ಜಿಹಾದ್ ನಡೆಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹ ಮಾಡುತ್ತೇವೆ. ಈ ಕೆಲಸಗಳನ್ನು ಪೊಲೀಸ್ ಇಲಾಖೆ ಮಾಡಿದರೆ, ಸಮಾಜದಲ್ಲಿ ಶಾಂತಿ, ಸಾಮರಸ್ಯ ನೆಲೆಸುತ್ತದೆ ಎಂದರು.
Do not sacrifice cows on Bakrid warns Bajrang Dal in Mangalore in the name of Bakrid. Cow trafficking and transporting cows illegally will not be tolerated said Sunil K R in Mangalore.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm