ಬ್ರೇಕಿಂಗ್ ನ್ಯೂಸ್
27-06-23 06:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಪಕ್ಷದ ಶಿಸ್ತು ಮೀರಿ ಯಾರು ಕೂಡ ಯಾವುದೇ ಹೇಳಿಕೆಗಳನ್ನು ನೀಡಬಾರದು. ಪಕ್ಷದ ಅನುಶಾಸನದ ಪ್ರಕಾರವೇ ಎಲ್ಲರೂ ನಡೆದುಕೊಳ್ಳಬೇಕು. ಪಕ್ಷದ ಸೂಚನೆ ಮೀರಿ ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಚ್ಚಾಟದಲ್ಲಿ ತೊಡಗಿರುವ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ನಾಯಕತ್ವ ವಿರುದ್ಧ ಪಕ್ಷದ ನಾಯಕರಿಂದಲೇ ಅಪಸ್ವರ ಕುರಿತ ಪ್ರಶ್ನೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್, ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲಿಯೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ ಚುನಾವಣೆಗೆ ತಯಾರಿ ಮಾಡುತ್ತಿದ್ದಾರೆ. ಆದರೂ ಕೆಲವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಿನ್ನೆಯೇ ಈ ಬಗ್ಗೆ ಎಲ್ಲ ಹಿರಿಯರಲ್ಲಿ ಮಾತನಾಡಿದ್ದೇನೆ. ಇವತ್ತಿನಿಂದ ಯಾರೂ ಯಾವುದೇ ಹೇಳಿಕೆಗಳನ್ನು ನೀಡಬಾರದೆಂದು ಸೂಚಿಸಿದ್ದೇನೆ ಎಂದರು.
ಅತಿರೇಕದ ಹೇಳಿಕೆ ಕೊಡುವ ಎಲ್ಲರಿಗೂ ನೋಟಿಸ್ ನೀಡಲಾಗುತ್ತದೆ. ಮತ್ತೆ ಪಕ್ಷವನ್ನು ಲೋಕಸಭಾ ಚುನಾವಣೆಗೆ ತಯಾರಿ ಮಾಡಿಸಬೇಕು. ಲೋಕಸಭಾ ಚುನಾವಣೆ ಗೆಲ್ಲುವುದೇ ಗುರಿಯಾಗಬೇಕು. ಈಗಾಗಲೇ ಬೂತ್ ಗಟ್ಟಿ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಕಾರ್ಯಕರ್ತರೊಡನೆ ಸಂವಾದ ಮಾಡಿದ್ದಾರೆ. ನಮ್ಮ ಜವಾಬ್ದಾರಿ ಜಾಸ್ತಿ ಇದೆ. ಕಾರ್ಯಕರ್ತರು ಬಹಳ ಉತ್ಸಾಹ ಮತ್ತು ಪ್ರೇರಣೆಯಿಂದ ಲೋಕಸಭಾ ಚುನಾವಣೆಗೆ ತಯಾರಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಗೋ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ವಿಚಾರದಲ್ಲಿ ಮಾತನಾಡಿದ ಅವರು, ಗೋವುಗಳ ರಕ್ಷಣೆಗಾಗಿ ಬಿಜೆಪಿ ಕಾನೂನು ತಂದಿದೆ. ಆದ್ದರಿಂದ ಕಾನೂನು ಜಾರಿಯಲ್ಲಿರುವಾಗ ಗೋಕಳ್ಳರ ಮತ್ತು ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
Mangalore Govt should take strict measures to prevent cattle theft, slaughter, internal fight in BJP not tolerated says Nalin Kateel. Speaking to media here on Tuesday, June 27, he said, “The BJP government has introduced the anti-cattle slaughter law to protect the culture of this land. Even Mahatma Gandhi spoke about preserving the cattle.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm