ಬ್ರೇಕಿಂಗ್ ನ್ಯೂಸ್
02-11-20 03:07 pm Mangalore Correspondent ಕರಾವಳಿ
ಉಳ್ಳಾಲ, ನವೆಂಬರ್ 02: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನೂತನ ಅಧ್ಯಕ್ಷರಾಗಿ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷರಾಗಿ ಅಯೂಬ್ ಮಂಚಿಲ ಆಯ್ಕೆಯಾಗಿದ್ದಾರೆ.
ಎರಡು ವರುಷಗಳ ಹಿಂದೆ ನಡೆದ ಉಳ್ಳಾಲ ನಗರಸಭಾ ಚುನಾವಣೆಯಲ್ಲಿ ಯಾವ ಪಕ್ಷಗಳು ಬಹುಮತ ಪಡೆಯದೆ ಅತಂತ್ರ ಫಲಿತಾಂಶ ಬಂದಿತ್ತು. ಕಾಂಗ್ರೆಸ್ 13, ಬಿಜೆಪಿ 6 , ಜೆಡಿಎಸ್ 4, ಎಸ್ ಡಿಪಿಐ 6, ಪಕ್ಷೇತರ 2 ಸ್ಥಾನಗಳನ್ನು ಜಯಿಸಿದ್ದವು. ಒಟ್ಟು 31 ಸ್ಥಾನಗಳಲ್ಲಿ ಅಧಿಕಾರಕ್ಕೆ 17 ಸ್ಥಾನಗಳು ಬೇಕಾಗಿದ್ದು ಫಲಿತಾಂಶ ಅತಂತ್ರವಾಗಿತ್ತು.
ಅಧ್ಯಕ್ಷ , ಉಪಾಧ್ಯಕ್ಷ ಗಾದಿಯ ನೇಮಕಾತಿಯ ಮೀಸಲಾತಿ ವಿಚಾರದಲ್ಲಿ ಕಾನೂನು ತೊಡಕು ಉಂಟಾಗಿ ವ್ಯಾಜ್ಯವು ಕೋರ್ಟ್ ಮೆಟ್ಟಿಲೇರಿ ಆಡಳಿತ ಚುನಾವಣೆ ವಿಳಂಬವಾಗಿತ್ತು. ಇದೀಗ ಕೋರ್ಟ್ ಆದೇಶದ ಪ್ರಕಾರ ನಡೆದ ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಅತಂತ್ರ ಫಲಿತಾಂಶದ ಪರಿಣಾಮ ಸಂಖ್ಯಾಬಲದ ಆಧಾರದಲ್ಲಿ ಚುನಾವಣೆ ಪ್ರಕ್ರಿಯೆ ಚುನಾವಣಾಧಿಕಾರಿ ಮಂಗಳೂರು ಸಹಾಯ ಆಯುಕ್ತರಾದ ರವಿಚಂದ್ರ ನಾಯಕ್ ಸಮಕ್ಷಮದಲ್ಲಿ ನಡೆದಿದೆ. ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ 3 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ನಡೆದು ನಗರಸಭಾ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಪ್ರಕ್ರಿಯೆ ನಡೆಸಲಾಯಿತು.


ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಸ್ಥಾನಕ್ಕೆ ನಡೆದ ಚುನಾವಣೆ ಪೈಕಿ ಬಿಜೆಪಿಯ ರೇಷ್ಮಾ ಜಗದೀಶ್ ಪರವಾಗಿ 10 ಮತಗಳು (ಬಿಜೆಪಿ 6, ಜೆಡಿಎಸ್ 3, ಪಕ್ಷೇತರ 1) ಚಲಾವಣೆಯಾದರೆ, ಕಾಂಗ್ರೆಸ್ ಪಕ್ಷದ ಚಿತ್ರಕಲಾ ಕೆ. ಪರವಾಗಿ ಶಾಸಕ ಖಾದರ್ ಸೇರಿದಂತೆ 15 ಮತಗಳು (ಕಾಂಗ್ರೆಸ್ 13, ಶಾಸಕ ಖಾದರ್ 1, ಪಕ್ಷೇತರ 1) ಚಲಾವಣೆಯಾಗಿ, ಎಸ್ ಡಿಪಿಐ ಪಕ್ಷದ ಝರೀನ ಬಾನು ಪರ 6 ಮತಚಲಾವಣೆ ( 6 ಎಸ್ ಡಿಪಿಐ) ನಡೆದು ಅಂತಿಮವಾಗಿ 15 ಮತ ಪಡೆದ ಚಿತ್ರಕಲಾ ಚಂದ್ರಕಾಂತ್ ಅಧ್ಯಕ್ಷೆಯಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸ್ಥಾನಕ್ಕೆ ನಡೆದ ಚುನಾವಣೆ ಪೈಕಿ ಜೆಡಿಎಸ್ ನ ಅಬ್ದುಲ್ ಜಬ್ಬಾರ್ ಪರವಾಗಿ 11 ಮತಗಳು( 6 ಬಿಜೆಪಿ, 4 ಜೆಡಿಎಸ್, 1 ಪಕ್ಷೇತರ) ಚಲಾವಣೆಯಾದರೆ, ಆಯೂಬ್ ಮಂಚಿಲ ಪರವಾಗಿ 14 ಮತಗಳು (14 ಕಾಂಗ್ರೆಸ್) ಚಲಾವಣೆಯಾಗಿ, ಎಸ್ ಡಿಪಿಐ ನ ಮಹಮ್ಮದ್ ರಮೀಝ್ ಪರವಾಗಿ 6 ಮತಗಳು (6 ಎಸ್ ಡಿಪಿಐ) ಚಲಾವಣೆಯಾಗಿ ಅಂತಿಮವಾಗಿ 14 ಮತಗಳನ್ನು ಪಡೆದ ಕಾಂಗ್ರೆಸಿನ ಆಯೂಬ್ ಮಂಚಿಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಜೆಡಿಎಸ್ ನಗರ ಸದಸ್ಯ ದಿನಕರ್ ಉಳ್ಳಾಲ್ ಯಾರಿಗೂ ಮತ ಚಲಾಯಿಸದೆ ತಟಸ್ಥವಾಗಿ ಉಳಿದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ , ಉಪಾಧ್ಯಕ್ಷರನ್ನು ಶಾಸಕ ಯು.ಟಿ ಖಾದರ್ ಅಭಿನಂದಿಸಿದರು.
Mangalore Chitra Chandrakanth and Ayub Manchila of the Congress have been elected president and vice-president respectively of Ullal municipality.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm