ಬ್ರೇಕಿಂಗ್ ನ್ಯೂಸ್
28-06-23 02:14 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ನಗರದ ಹಂಪನಕಟ್ಟೆ ಮಂಗಳೂರು ವಿವಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಕೊನೆಗೂ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗವಹಿಸಿದ್ದಾರೆ. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ವಿರೋಧ ಕೇಳಿಬಂದರೂ ಮಂಗಳವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಸದ್ದಿಲ್ಲದೆ ಬಂದು ಹೋಗಿದ್ದಾರೆ.
ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಜೂ.23ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಗೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಆಹ್ವಾನಿಸಿದ್ದಕ್ಕೆ ಎನ್ಎಸ್ಯುಐ ವಿರೋಧ ವ್ಯಕ್ತಪಡಿಸಿತ್ತು. ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಲ್ಲದೆ, ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಕಾಲೇಜು ಆಡಳಿತವು ಎರಡೂ ಕಾರ್ಯಕ್ರಮಗಳನ್ನು ಮುಂದೂಡಿಕೆ ಮಾಡಿತ್ತು. ಕಾಲೇಜಿನ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಎನ್ಎಸ್ ಯುಐ ವಿದ್ಯಾರ್ಥಿಗಳು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದರೆ, ಕಾಲೇಜಿನಲ್ಲಿ ಕೋಮು ಭಾವನೆ ಕೆರಳಲು ಕಾರಣವಾಗುತ್ತೆ ಎಂದು ಆರೋಪಿಸಿತ್ತು.



ಮುಂದೂಡಿದ್ದ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಮಂಗಳವಾರ ನಡೆಸಲಾಗಿದೆ. ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗಿಯಾಗಿ ಭಾಷಣ ಮಾಡಿದ್ದಾರೆ. ಶಾಂತಿಯುತವಾಗಿ ಕಾರ್ಯಕ್ರಮ ಮುಕ್ತಾಯವಾಗಿದ್ದು ವಿರೋಧ ವ್ಯಕ್ತಪಡಿಸಿದ್ದವರಿಗೆ ಶ್ರೀಕಾಂತ್ ಶೆಟ್ಟಿ ಬಂದು ಭಾಷಣ ಮಾಡಿ ಹೋಗಿದ್ದೇ ಗೊತ್ತಿಲ್ಲ. ಕೋಮು ಪ್ರಚೋದನೆ ಭಾಷಣ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದರು. ಕಾರ್ಯಕ್ರಮಕ್ಕೆ ಪೊಲೀಸರು ಭದ್ರತೆಯನ್ನೂ ನೀಡಿದ್ದರು.
Hindu Activist Shrikanth Shetty attends program at Mangalore University organised by ABVP amid NSIU Congress filing complaint to Police and Administration to stop the program as he would deliver hate speech.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 10:10 pm
Mangalore Correspondent
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm