ಬ್ರೇಕಿಂಗ್ ನ್ಯೂಸ್
29-06-23 04:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ಪದವಿ ಕಲಿತ ಯುವಕರಿಗೆ ರಾಜಕೀಯ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಲು ಸೂಕ್ತ ತರಬೇತಿ ಕೇಂದ್ರಗಳು ಇಲ್ಲ. ಹಾಗಾಗಿ ರಾಜಕೀಯ ಕ್ಷೇತ್ರದ ತರಬೇತಿ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಯೋಜನೆ ಜಾರಿ ಮಾಡಲಿದ್ದೇವೆ. ಸದ್ಯ ಪುಣೆಯಲ್ಲಿ ಮಾತ್ರ ಈ ರೀತಿಯ ತರಬೇತಿ ಸಂಸ್ಥೆ ಇದೆ, ಅವರ ಜೊತೆ ಚರ್ಚಿಸಿ ಒಂದು ವರ್ಷದ ಕೋರ್ಸ್ ಆರಂಭಿಸಲಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು, ರಾಜಕೀಯ, ಸರಕಾರಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಉದ್ದೇಶ ಮತ್ತು ಆಸಕ್ತರಿಗೆ ತರಬೇತಿ ನೀಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗುವುದು. ಪದವಿ ಮುಗಿಸಿದವರು ಆರು ತಿಂಗಳು ತರಬೇತಿ, ನಂತರದ ಆರು ತಿಂಗಳು ಇಂಟರ್ನ್ ಶಿಪ್ ಪಡೆಯಲು ಅವಕಾಶ ಇರುತ್ತದೆ. ಕೇವಲ ಎಂಎಲ್ ಎ, ಎಂಪಿ ಆಗೋದಷ್ಟೇ ಮುಖ್ಯ ಅಲ್ಲ. ರಾಜಕೀಯ ಕ್ಷೇತ್ರಕ್ಕೆ ಬರುವವರು ಮೊದಲಾಗಿ ಈ ತರಬೇತಿ ಪಡೆದಲ್ಲಿ ಸುಲಭವಾಗಿ ಮೇಲಕ್ಕೇರಲು ಸಾಧ್ಯವಾಗುತ್ತದೆ.
ನಾವು ರಾಜಕೀಯಕ್ಕೆ ಬರುವಾಗ ಇಂತಹ ತರಬೇತಿಗೆ ಅವಕಾಶ ಇರಲಿಲ್ಲ. ಇಂತಹ ತರಬೇತಿ ಪಡೆದಲ್ಲಿ ಸರ್ಕಾರೇತರ ಎನ್ ಜಿಓ ಸಂಸ್ಥೆ ಆರಂಭಿಸಬಹುದು. ಸರ್ಕಾರಿ ನೌಕರನಾಗಿ ಸೇರಬಹುದು. ಶಾಸಕರ ಜೊತೆಗೆ ಕೆಲಸ ಮಾಡಬಹುದು. ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಿದ ಖಾದರ್, ರಾಜ್ಯದ ಪ್ರಮುಖ ಕೇಂದ್ರದಲ್ಲೇ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಇದಕ್ಕೆ ಸಿಲೇಬಸ್ ಇರಲಿದೆ, ಫುಲ್ ಟೈಮ್ ಉಪನ್ಯಾಸಕರು ಇರ್ತಾರೆ. ಮಧ್ಯೆ ರಾಜಕೀಯ ನಾಯಕರು, ಮುತ್ಸದ್ದಿಗಳು ಬಂದು ತರಬೇತಿ ಕೊಡ್ತಾರೆ. ತರಬೇತಿ ಪಡೆದವರು ಮುಂದೆ ಒಳ್ಳೆಯ ನಾಯಕನಾಗಲು ಅವಕಾಶ ಇರುತ್ತದೆ ಎಂದು ಹೇಳಿದರು.
“Youth who have completed degree courses and are interested in politics will be trained through a one-year course at Karnataka Political Training Institute”, said the Speaker of Karnataka Legislative Assembly U T Khader during a press meet held at the Eden Club here, on June 29.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am