ಬ್ರೇಕಿಂಗ್ ನ್ಯೂಸ್
03-07-23 03:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಲೋಕಾಯುಕ್ತದಿಂದ ಬಂಧನಕ್ಕೊಳಗಾಗಿರುವ ತಹಸೀಲ್ದಾರ್ ಅಜಿತ್ ಕುಮಾರ್ ರೈ ಅಕ್ರಮ ಆಸ್ತಿ ಪ್ರಕರಣದಲ್ಲಿ ಅಂಡರ್ ವರ್ಲ್ಡ್ ಲಿಂಕ್ ಇದ್ಯಾ ಎನ್ನುವ ಅನುಮಾನ ಕೇಳಿಬಂದಿತ್ತು. ವಿದೇಶದಲ್ಲಿ ನೆಲೆಸಿರುವ ದಿ. ಮುತ್ತಪ್ಪ ರೈ ಬಂಟ ಮನ್ವಿತ್ ರೈ ಜೊತೆ ಸೇರಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪದ ಬಗ್ಗೆ ಸ್ವತಃ ಮನ್ವಿತ್ ರೈ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಮಾಡಿರುವ ಮನ್ವಿತ್ ರೈ, ತನ್ನ ಮೇಲೆ ಬಂದ ಆರೋಪವನ್ನ ಅಲ್ಲಗೆಳೆದಿದ್ದಾರೆ. ನಾನು ಮತ್ತು ಅಜಿತ್ ರೈ ಒಂದೇ ಊರಿನವರು ಅಷ್ಟೇ. ಅದು ಬಿಟ್ಟು ನಮ್ಮ ವ್ಯವಹಾರದಲ್ಲಿ ಯಾವುದೇ ಸಂಬಂಧಗಳಿಲ್ಲ. ಮೊದಲಿನಿಂದಲೂ ಅಜಿತ್ ರೈ ನನಗೆ ಒಳ್ಳೆಯ ಫ್ರೆಂಡ್ ಅಷ್ಟೇ ಆಗಿದ್ದಾರೆ.
ನನ್ನ ಹೆಸರಲ್ಲಿ ಯಾವುದಾದ್ರೂ ಒಂದು ಹತ್ತು ಎಕರೆ ಆಸ್ತಿ ಇದ್ರೆ ತೋರಿಸಿ. ಬೆಂಗಳೂರು ಅಥವಾ ಎಲ್ಲೇ ಆಗಲಿ ನನ್ನ ಹೆಸರಲ್ಲಿ ಯಾವುದಾದ್ರು ಆಸ್ತಿ ಅಥವಾ ಡಾಕ್ಯುಮೆಂಟ್ ಇದ್ರೆ ಹೇಳಲಿ. ಎರಡು ದಿನಗಳಲ್ಲಿ ಬಂದು ನಾನೇ ಸರೆಂಡರ್ ಆಗ್ತೀನಿ.
ನನಗೆ ಅಂತಹ ಯಾವುದೇ ವ್ಯವಹಾರಗಳಿಲ್ಲ. ನಾನು ಥಾಯ್ಲೆಂಡ್ ಗೆ ಬಂದು ಒಂದೂವರೆ ವರ್ಷ ಆಗಿದೆ. ಥಾಯ್ಲೆಂಡ್ ನಲ್ಲಿಯೇ ನನಗೆ ಸಂಬಂಧಪಟ್ಟ ವ್ಯವಹಾರಗಳನ್ನ ಮಾಡ್ತಾ ಇದ್ದೇನೆ. ಒಂದು ವರ್ಷದ ಹಿಂದೆಯೂ ನನ್ನ ಮೇಲೆ ಕೆಲವು ಆರೋಪಗಳನ್ನ ಮಾಡಿದ್ರು. ಗುಣರಂಜನ್ ಶೆಟ್ಟಿಗೆ ಮನ್ವಿತ್ ರೈಯಿಂದ ಬೆದರಿಕೆ ಇದೆ ಅಂತ ಸುದ್ದಿ ಹಬ್ಬಿಸಿದ್ದರು.
![]()
ಈ ಬಗ್ಗೆ ತನಿಖೆ ಆದಮೇಲೆ ಮನ್ವಿತ್ ರೈ ಪಾತ್ರ ಇಲ್ಲ ಅಂತ ಮಂಗಳೂರಿನ ಪೊಲೀಸರೇ ಹೇಳಿದ್ದಾರೆ. ಇದೀಗ ಅಜಿತ್ ರೈ ಪ್ರಕರಣದಲ್ಲಿ ನನ್ನ ಹೆಸರನ್ನ ಬಳಕೆ ಮಾಡ್ತಾ ಇದ್ದಾರೆ. ನನಗೂ ಆತನಿಗೂ ಯಾವುದೇ ಸಂಬಂಧ ಇಲ್ಲ. ಆದಾಗ್ಯೂ ನನ್ನ ಬಗ್ಗೆ ವಿನಾಕಾರಣ ಸುದ್ದಿ ಹಬ್ಬಿಸಿದರೆ ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ವಿಡಿಯೋದಲ್ಲಿ ಮನ್ವಿತ್ ರೈ ಹೇಳಿದ್ದಾರೆ.
ಲೋಕಾಯುಕ್ತ ಬಂಧಿಸಿರುವ ಅಜಿತ್ ರೈ ಮತ್ತು ಮನ್ವಿತ್ ರೈ ಪುತ್ತೂರಿನ ಕೆಯ್ಯೂರು ಗ್ರಾಮದವರು. ಹೀಗಾಗಿ ಇವರಿಗೆ ಲಿಂಕ್ ಇದೆಯೆಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
#Tahsildar #AjithKumarRai arrest by #Lokayukta, #ManvithRai says i am no where connected to Ajith rai shares video from Thailand pic.twitter.com/fr2WO7lMma
— Headline Karnataka (@hknewsonline) July 3, 2023
Tahsildar Ajith Kumar Rai arrest by Lokayukta, Manvith Rai says i am no where connected to Ajith rai shares video from Thailand.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am