ಬ್ರೇಕಿಂಗ್ ನ್ಯೂಸ್
02-11-20 10:02 pm Udupi Reporter ಕರಾವಳಿ
ಉಡುಪಿ, ನ. 2: ಶಿರಿಯಾರ ಗ್ರಾಪಂ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ಮಿಲ್ ಒಂದಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಯ 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿದ್ದ ಅಧಿಕಾರಿಗಳು, ದಾಳಿ ನಡೆಸಿದ್ದಾರೆ. ಈ ಅಕ್ಕಿಯನ್ನು ಮನೆ ಮನೆಗಳಿಂದ ಸಂಗ್ರಹಿಸಿ ತಂದು ಇಲ್ಲಿ ದಾಸ್ತಾನು ಇರಿಸಲಾಗಿತ್ತು. ಈ ಅಕ್ಕಿಯನ್ನು ಲಾರಿಗಳಿಗೆ ಲೋಡ್ ಮಾಡಿ ಹಾವೇರಿ ಸೇರಿದಂತೆ ಹೊರಜಿಲ್ಲೆಗಳಿಗೆ ಸಾಗಾಟ ಮಾಡಲು ಯತ್ನ ನಡೆದಿತ್ತು. ದಾಳಿ ವೇಳೆ ಮಿಲ್ ಮಾಲಕ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ವಶಪಡಿಸಿಕೊಂಡಿರುವ ಅಕ್ಕಿಯ ಒಟ್ಟು ಮೌಲ್ಯ 16.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಕ್ಕಿ ತುಂಬಲು ಬಂದಿದ್ದ ಮೂವರು ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿಗಳು, ಎರಡು 407 ಟೆಂಪೋ, ಒಂದು ಟಾಟಾ ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಉಡುಪಿ ಆಹಾರ ಇಲಾಖೆಯ ಉಪನಿರ್ದೇಶಕ ಗಜೇಂದ್ರ ವಿ., ಉಡುಪಿ ಆಹಾರ ನಿರೀಕ್ಷಕಿ ಪಾರ್ವತಿ, ಕುಂದಾಪುರ ನಿರೀಕ್ಷಕ ಸುರೇಶ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಮೊದಲಾದವರು ಹಾಜರಿದ್ದರು.
ಬಡವರ ಅಕ್ಕಿ ಉಳ್ಳವರ ಪಾಲು !
ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು, ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ಜಾಲವನ್ನು ಪತ್ತೆ ಮಾಡಲಾಗಿತ್ತು. ಈಗ ಅಕ್ಕಿಯನ್ನು ಮಾರಾಟ ಮಾಡುವ ಜಾಲ ಪತ್ತೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ತಿಳಿಸಬೇಕು. ಆಗ ಮಾತ್ರ ಇಂತಹ ಜಾಲದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
Officials on Monday November 2 seized several quintals of rice that was being sold illegally at Udupi. The rice was part of the ration under the Anna Bhagya scheme
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 08:29 pm
HK News Staffer
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm