ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm