ಬ್ರೇಕಿಂಗ್ ನ್ಯೂಸ್
05-07-23 06:03 pm Udupi Correspondent ಕರಾವಳಿ
ಉಡುಪಿ, ಜು 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.
ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯಾ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kamalashile temple priest drowned in river after accidentally fall from two wheeler due to heavy rains in Udupi.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm