ಬ್ರೇಕಿಂಗ್ ನ್ಯೂಸ್
03-11-20 01:55 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 03: ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಕೆ. ಜೀವಂಧರ್ ಜೈನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಅವಿರೋಧ ಆಯ್ಕೆಯಾಗಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
31 ಸದಸ್ಯ ಬಲದ ಪುತ್ತೂರು ನಗರಸಭೆಯಲ್ಲಿ 25 ಬಿಜೆಪಿ, 5 ಕಾಂಗ್ರೆಸ್ ಹಾಗೂ ಓರ್ವ ಎಸ್ಡಿಪಿಐ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಜೀವಂಧರ್ ಜೈನ್ ಮತ್ತು ಕಾಂಗ್ರೆಸ್ನಿಂದ ರಾಬಿನ್ ತಾವ್ರೋ ಸ್ಪರ್ಧಿಸಿದ್ದರು. ಜೀವಂಧರ್ ಜೈನ್ ಅವರು ಶಾಸಕರ, ಸಂಸದರ ಮತಗಳು ಸೇರಿದಂತೆ ಒಟ್ಟು 27 ಮತಗಳನ್ನು ಪಡೆದು ವಿಜಯ ಸಾಧಿಸಿದರು. ರಾಬಿನ್ ತಾವ್ರೋ ಅವರಿಗೆ 3 ಮತಗಳು ಲಭಿಸಿದವು. ಕಾಂಗ್ರೆಸಿನ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು. ಎಸ್ಡಿಪಿಐ ಸದಸ್ಯೆ ತಟಸ್ಥರಾಗಿದ್ದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್ನಿಂದ ಯಾರೂ ಸ್ಪರ್ಧಿಸದ ಹಿನ್ನಲೆಯಲ್ಲಿ ಬಿಜೆಪಿಯ ವಿದ್ಯಾಗೌರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಂದಾಳುಗಳಾದ ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
K Jeevandhar Jain of the BJP was elected as the president of Puttur city municipality while Vidya R Gowri of the same party was elected unopposed to the post of the vice president on Monday November 2.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am