ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm