ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm