ಬ್ರೇಕಿಂಗ್ ನ್ಯೂಸ್
12-07-23 07:21 pm Mangalore Correspondent ಕರಾವಳಿ
ಉಳ್ಳಾಲ, ಜು.12: ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ದಿಢೀರನೆ ಹೆಡೆ ಎತ್ತಿದ್ದು ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ನಿಯಮಗಳನ್ನು ಗಾಳಿಗೆ ತೂರಿ ಈ ಬಾರಿಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು.
ಶಾರದಾ ವಿದ್ಯಾಗಣಪತಿ ಶಾಲಾ ವಿದ್ಯಾರ್ಥಿನಿ ರಶ್ಮಿತಾ ಮಾತನಾಡಿ ಶಾಲಾ ಆವರಣದ ನೂರು ಮೀಟರ್ ವ್ಯಾಪ್ತಿಯೊಳಗಡೆ ಯಾವುದೇ ಮಾದಕ ಪದಾರ್ಥಗಳನ್ನ ಮಾರುವಂತಿಲ್ಲ ಎಂದು ಕಾನೂನು ಇದೆ. ಆದರೆ ಇಲ್ಲಿ ನಿಯಮಗಳನ್ನೆಲ್ಲ ಉಲ್ಲಂಘಿಸಿ ಬಾರ್ ನಿರ್ಮಿಸಲಾಗಿದ್ದು ಇದರಿಂದ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರೋದು ಖಂಡಿತ ಎಂದಳು.
ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಮಾತನಾಡಿ ಸರಕಾರದ ಮಾರ್ಗಸೂಚಿಗಳನ್ನ ಅವಗಣನೆ ಮಾಡಿ, ಸಾರ್ವಜನಿಕ ಆಕ್ಷೇಪಗಳಿಗೆ ಅವಕಾಶ ನೀಡದೆ ಪಂಚಾಯತ್ ಆಡಳಿತವು ಬಾರ್ ನಿರ್ಮಾಣಕ್ಕೆ ತರಾತುರಿಯಲ್ಲಿ ನಿರಾಕ್ಷೇಪಣಾ ಪತ್ರ ನೀಡಿರುವುದು ಖಂಡನೀಯ. ಸರಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಆವರಣದ 100 ಮೀಟರ್ ಅಂತರದೊಳಗೆ ಮದ್ಯದಂಗಡಿ ತೆರೆಯಲು ಅವಕಾಶ ಇರೋದಿಲ್ಲ. ಇಲ್ಲಿ ಶಾಲಾ ದ್ವಾರದ 53 ಮೀಟರ್ ಮತ್ತು ಶಾಲಾ ಆವರಣದ 13 ಮೀಟರ್ ಅಂತರದಲ್ಲಿ ಬಾರ್ ನಿರ್ಮಿಸಿ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಪಂಚಾಯತ್ ಅಧ್ಯಕ್ಷರು ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಾರ್ ಸ್ಥಳಾಂತರಿಸದಿದ್ದರೆ ಮುಂದೆ ಪ್ರಜಾಪ್ರಭುತ್ವದಡಿಯ ಎಲ್ಲಾ ಹೋರಾಟಕ್ಕೂ ಶಾಲಾಡಳಿತ ತಯಾರಾಗಿದೆ ಎಂದರು. ವಿವಾದಿತ ಬಾರ್ & ರೆಸ್ಟೋರೆಂಟ್ ಮುಂದೆಯೂ ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರ ಹಾಕಿದರು.
Mangalore Permission to open Bar and Restaurant opposite to Sharadha school, students Ghearo Balepuni Gram Panchayat opposing to cancel the permission. Students Ghearo office amid heavy rains.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm