ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.
ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm