ಬ್ರೇಕಿಂಗ್ ನ್ಯೂಸ್
04-11-20 12:57 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಯಾವಾಗಿನ ರೀತಿ ಇರುತ್ತಿದ್ದರೆ ಈಗ ಕಂಬಳಕ್ಕೆ ಕೋಣಗಳು ರೆಡಿಯಾಗುತ್ತಿದ್ದವು. ಕಂಬಳ ಸಮಿತಿಯವರು ಕಂಬಳದ ವೇಳಾಪಟ್ಟಿಯನ್ನು ರೆಡಿ ಮಾಡುತ್ತಿದ್ದರು. ಆದರೆ, ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಕೊರೊನಾ ಕರಿಛಾಯೆ ಆವರಿಸಿದೆ. ಈ ಬಾರಿ ಕಂಬಳ ಆಗುತ್ತೋ ಇಲ್ಲವೋ ಅನ್ನುವ ಕುತೂಹಲ, ನಿರೀಕ್ಷೆ ಜನರಲ್ಲಿದೆ.
ಈ ಬಗ್ಗೆ ಕಂಬಳ ಸಮಿತಿಯವರಲ್ಲಿ ಕೇಳಿದರೆ, ನಾವು ಕಂಬಳ ನಡೆಸಲು ರೆಡಿ ಇದ್ದೇವೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡೇ ಕಂಬಳ ಮಾಡುತ್ತೇವೆ. ಅದಕ್ಕೆ ಜಿಲ್ಲಾಡಳಿತ ಅವಕಾಶ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ಜಿಲ್ಲಾಡಳಿತ ಕಂಬಳಕ್ಕೆ ಸದ್ಯದಲ್ಲಿ ಅವಕಾಶ ಕೊಡುವ ಹಾಗಿಲ್ಲ. ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈಗ ಅವಕಾಶ ಕೊಡುತ್ತಿಲ್ಲ. ಕೆಲವು ಸಭೆ, ಸಮಾರಂಭಗಳಿಗೆ ಅವಕಾಶ ನೀಡಿದರೂ 150 ಜನಕ್ಕೆ ಮಾತ್ರ ಸೀಮಿತ ಎನ್ನುವ ನಿಯಮ ಹೇರಲಾಗುತ್ತಿದೆ. ಕಂಬಳಕ್ಕೆ ಹೋಲಿಸಿದರೆ, ಇದು ಸಾಧ್ಯವಿಲ್ಲ. ಸಾವಿರಾರು ಜನರು ಸೇರುವ ಕಾರಣ ಇಲ್ಲಿ ಕಂಬಳ ಅಭಿಮಾನಿಗಳು, ಸಾರ್ವಜನಿಕರು, ಕಂಬಳ ಕೋಣಗಳ ಜೊತೆ ಆಗಮಿಸುವವರು ಹೀಗೆ ಎಲ್ಲರೂ ಇರುತ್ತಾರೆ. ಹೀಗಾಗಿ ನವೆಂಬರ್ ವರೆಗೆ ಕೇಂದ್ರ ಸರಕಾರದ ನಿರ್ಬಂಧ ಇರುವುದರಿಂದ ಮುಂದಿನ ಆದೇಶದ ಬಗ್ಗೆ ಜಿಲ್ಲಾಡಳಿತ ಎದುರು ನೋಡುತ್ತಿದೆ.



ಡಿಸೆಂಬರ್ ವೇಳೆಗೆ, ಕೇಂದ್ರ ಸರಕಾರ ನಿರ್ಬಂಧ ಸಡಿಲಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ತಗ್ಗುತ್ತಿರುವುದು ಮತ್ತು ಚೇತರಿಕೆ ಸಂಖ್ಯೆಯೂ ಹೆಚ್ಚುತ್ತಿರುವುದರಿಂದ ನಿರ್ಬಂಧ ಸಡಿಲಿಕೆ ಬಗ್ಗೆ ನವೆಂಬರ್ ಅಂತ್ಯಕ್ಕೆ ಕೇಂದ್ರ ಹೊಸ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಅಲ್ಲದೆ, ಆಯಾಭಾಗದ ಜನಪದ ಪ್ರಕಾರಗಳು, ಉತ್ಸವಗಳಿಗೆ ಕೇಂದ್ರ ಸರಕಾರ ಈಗಲೇ ಅವಕಾಶ ಕೊಟ್ಟಿದೆ. ಈ ನೆಲೆಯಲ್ಲಿ ನೋಡಿದರೆ ಕಂಬಳಕ್ಕೂ ಅವಕಾಶ ಸಿಗುವ ಸಾಧ್ಯತೆ ಹೆಚ್ಚು.
ಈ ನಡುವೆ, ಕಂಬಳ ಸಮಿತಿಯವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಕಂಬಳಕ್ಕೆ ಅವಕಾಶ ಕೊಡುವಂತೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಕೂಡ, ಶೀಘ್ರದಲ್ಲೇ ಕಂಬಳ ಸಮಿತಿಯವರ ಜೊತೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಡಿಸೆಂಬರ್ ಅಲ್ಲದಿದ್ದರೂ ಜನವರಿ ವೇಳೆಗೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಂತೂ ಪಕ್ಕಾ ಎನ್ನಲಾಗುತ್ತಿದೆ.
The spread of coronavirus has affected the staging of Mangalore Sporting event Kambala. Kambala lovers are anticipating for the dates to be announced.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am