ಬ್ರೇಕಿಂಗ್ ನ್ಯೂಸ್
04-11-20 12:57 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಯಾವಾಗಿನ ರೀತಿ ಇರುತ್ತಿದ್ದರೆ ಈಗ ಕಂಬಳಕ್ಕೆ ಕೋಣಗಳು ರೆಡಿಯಾಗುತ್ತಿದ್ದವು. ಕಂಬಳ ಸಮಿತಿಯವರು ಕಂಬಳದ ವೇಳಾಪಟ್ಟಿಯನ್ನು ರೆಡಿ ಮಾಡುತ್ತಿದ್ದರು. ಆದರೆ, ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಕೊರೊನಾ ಕರಿಛಾಯೆ ಆವರಿಸಿದೆ. ಈ ಬಾರಿ ಕಂಬಳ ಆಗುತ್ತೋ ಇಲ್ಲವೋ ಅನ್ನುವ ಕುತೂಹಲ, ನಿರೀಕ್ಷೆ ಜನರಲ್ಲಿದೆ.
ಈ ಬಗ್ಗೆ ಕಂಬಳ ಸಮಿತಿಯವರಲ್ಲಿ ಕೇಳಿದರೆ, ನಾವು ಕಂಬಳ ನಡೆಸಲು ರೆಡಿ ಇದ್ದೇವೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡೇ ಕಂಬಳ ಮಾಡುತ್ತೇವೆ. ಅದಕ್ಕೆ ಜಿಲ್ಲಾಡಳಿತ ಅವಕಾಶ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ಜಿಲ್ಲಾಡಳಿತ ಕಂಬಳಕ್ಕೆ ಸದ್ಯದಲ್ಲಿ ಅವಕಾಶ ಕೊಡುವ ಹಾಗಿಲ್ಲ. ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈಗ ಅವಕಾಶ ಕೊಡುತ್ತಿಲ್ಲ. ಕೆಲವು ಸಭೆ, ಸಮಾರಂಭಗಳಿಗೆ ಅವಕಾಶ ನೀಡಿದರೂ 150 ಜನಕ್ಕೆ ಮಾತ್ರ ಸೀಮಿತ ಎನ್ನುವ ನಿಯಮ ಹೇರಲಾಗುತ್ತಿದೆ. ಕಂಬಳಕ್ಕೆ ಹೋಲಿಸಿದರೆ, ಇದು ಸಾಧ್ಯವಿಲ್ಲ. ಸಾವಿರಾರು ಜನರು ಸೇರುವ ಕಾರಣ ಇಲ್ಲಿ ಕಂಬಳ ಅಭಿಮಾನಿಗಳು, ಸಾರ್ವಜನಿಕರು, ಕಂಬಳ ಕೋಣಗಳ ಜೊತೆ ಆಗಮಿಸುವವರು ಹೀಗೆ ಎಲ್ಲರೂ ಇರುತ್ತಾರೆ. ಹೀಗಾಗಿ ನವೆಂಬರ್ ವರೆಗೆ ಕೇಂದ್ರ ಸರಕಾರದ ನಿರ್ಬಂಧ ಇರುವುದರಿಂದ ಮುಂದಿನ ಆದೇಶದ ಬಗ್ಗೆ ಜಿಲ್ಲಾಡಳಿತ ಎದುರು ನೋಡುತ್ತಿದೆ.



ಡಿಸೆಂಬರ್ ವೇಳೆಗೆ, ಕೇಂದ್ರ ಸರಕಾರ ನಿರ್ಬಂಧ ಸಡಿಲಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ತಗ್ಗುತ್ತಿರುವುದು ಮತ್ತು ಚೇತರಿಕೆ ಸಂಖ್ಯೆಯೂ ಹೆಚ್ಚುತ್ತಿರುವುದರಿಂದ ನಿರ್ಬಂಧ ಸಡಿಲಿಕೆ ಬಗ್ಗೆ ನವೆಂಬರ್ ಅಂತ್ಯಕ್ಕೆ ಕೇಂದ್ರ ಹೊಸ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಅಲ್ಲದೆ, ಆಯಾಭಾಗದ ಜನಪದ ಪ್ರಕಾರಗಳು, ಉತ್ಸವಗಳಿಗೆ ಕೇಂದ್ರ ಸರಕಾರ ಈಗಲೇ ಅವಕಾಶ ಕೊಟ್ಟಿದೆ. ಈ ನೆಲೆಯಲ್ಲಿ ನೋಡಿದರೆ ಕಂಬಳಕ್ಕೂ ಅವಕಾಶ ಸಿಗುವ ಸಾಧ್ಯತೆ ಹೆಚ್ಚು.
ಈ ನಡುವೆ, ಕಂಬಳ ಸಮಿತಿಯವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಕಂಬಳಕ್ಕೆ ಅವಕಾಶ ಕೊಡುವಂತೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಕೂಡ, ಶೀಘ್ರದಲ್ಲೇ ಕಂಬಳ ಸಮಿತಿಯವರ ಜೊತೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಹೀಗಾಗಿ ಡಿಸೆಂಬರ್ ಅಲ್ಲದಿದ್ದರೂ ಜನವರಿ ವೇಳೆಗೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಂತೂ ಪಕ್ಕಾ ಎನ್ನಲಾಗುತ್ತಿದೆ.
The spread of coronavirus has affected the staging of Mangalore Sporting event Kambala. Kambala lovers are anticipating for the dates to be announced.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 11:14 am
HK News Staffer
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm