ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.
ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm