ಬ್ರೇಕಿಂಗ್ ನ್ಯೂಸ್
22-07-23 07:48 pm Mangalore Correspondent ಕರಾವಳಿ
ಮಂಗಳೂರು, ಜು.22: ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಚಿವರಿಗೆ ಬರೆದ ಪತ್ರದಲ್ಲಿ ಅವರು ಈ ಪ್ರದೇಶದಲ್ಲಿ ಸಂಚರಿಸುವ ರೈಲುಗಳಿಗೆ ಹೊಸ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ.
ಬೆಂಗಳೂರು-ಮಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲಿಗೆ ರಾಣಿ ಅಬ್ಬಕ್ಕ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಸಂಸದರು ಮನವಿ ಮಾಡಿದ್ದಾರೆ.
ತಿರುವನಂತಪುರಂ-ಮುಂಬೈ ಎಲ್ಟಿಟಿ ಎಕ್ಸ್ಪ್ರೆಸ್ಗೆ ನೇತ್ರಾವತಿ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ-ಹಜರತ್ ನಿಜಾಮುದ್ದೀನ್ ರೈಲಿಗೆ ಮಂಗಳಾ ಲಕ್ಷದ್ವೀಪ ಎಕ್ಸ್ಪ್ರೆಸ್ ಎಂದು ಹೆಸರಿಡಿ. ಇದರಿಂದ ಪ್ರಯಾಣಿಕರು ತಮ್ಮ ಪ್ರಾದೇಶಿಕ ಹೆಸರುಗಳಿಂದ ರೈಲುಗಳನ್ನು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಎರಡು ರೈಲುಗಳು ಮೊದಲು ಮಂಗಳೂರಿನಿಂದಲೇ ಆರಂಭವಾಗಿದ್ದವು. ಈ ರೈಲುಗಳಿಗೆ ಸ್ಥಳೀಯ ಹೆಸರಿಟ್ಟರೇ ಪ್ರಯಾಣಿಕರು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಹೇಳಿದ್ದಾರೆ.
ರೈಲುಗಳಿಗೆ ಈ ಪ್ರದೇಶದ ವ್ಯಕ್ತಿಗಳು, ಸ್ಥಳಗಳು ಮತ್ತು ನದಿಗಳ ಹೆಸರನ್ನು ಇಡುವುದರಿಂದ ಕರಾವಳಿ ಜಿಲ್ಲೆಯ ಜನರ ವಿಶ್ವಾಸ ಹೆಚ್ಚುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಿಂದ ಮಂಗಳೂರಿಗೆ ಮೈಸೂರು ಮಾರ್ಗವಾಗಿ ಸಂಚರಿಸುವ (ರೈಲು ಸಂಖ್ಯೆ 16585/586) ರೈಲಿಗೆ ಮಂಗಳಾದೇವಿ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವಂತೆ ಕಟೀಲ್ ಅವರು ಮನವಿ ಮಾಡಿದ್ದಾರೆ.
Dakshina Kannada MP Nalin Kumar Kateel has urged union railway minster to name the popular trains of the city after eminent personalities and places of coastal Karnataka. He has written a letter to union railway minster Ashwini Vaishnav in this regard. Nalin urged the minister to name the train that runs between Bengaluru and Kannur via Mangaluru as Rani Abbakka Express.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm