ಬ್ರೇಕಿಂಗ್ ನ್ಯೂಸ್
27-07-23 07:49 pm Udupi Correspondent ಕರಾವಳಿ
ಉಡುಪಿ, ಜುಲೈ 27: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.
ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು.
ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.
Kushboo slams media over Camera in college Toilet, says its not two minutes noodles to keep updating speaking to media persons in Udupi.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm