ಬ್ರೇಕಿಂಗ್ ನ್ಯೂಸ್
27-07-23 07:57 pm Udupi Correspondent ಕರಾವಳಿ
ಉಡುಪಿ, ಜುಲೈ 27: ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ಜಟಾಪಟಿ ನಡೆದಿದೆ.
ಪೊಲೀಸರು ಒತ್ತಡಕ್ಕೊಳಗಾಗಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ವಿಡಿಯೋ ಮಾಡಿದ್ದ ಆರೋಪಿಗಳನ್ನು ಪ್ರಶ್ನೆ ಮಾಡುವ ಬದಲು ಈ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಅವರ ಮನೆಗೆ ಪೊಲೀಸರನ್ನು ಕಳಿಸಿ ಬೆದರಿಸುವ ಕೆಲಸ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಎಸ್ಪಿ ಅವರೇ ಸ್ಥಳಕ್ಕೆ ಬಂದು ಸ್ಪಷ್ಟನೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ. ಪೊಲೀಸರು ಮತ್ತು ಶಾಸಕ ಯಶಪಾಲ್ ಸುವರ್ಣ ಎಷ್ಟು ಮನವಿ ಮಾಡಿದರೂ, ವಿದ್ಯಾರ್ಥಿಗಳು ಕೇಳದೆ ಧರಣಿ ಮುಂದುವರಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ಏರ್ಪಟ್ಟಿದ್ದು, ಸ್ವತಃ ಶಾಸಕ ಯಶಪಾಲ್ ಸುವರ್ಣ ಅವರು ವಿದ್ಯಾರ್ಥಿಗಳನ್ನು ಪೊಲೀಸರಿಂದ ಬಿಡಿಸಲು ಹರಸಾಹಸಪಟ್ಟ ಪ್ರಸಂಗ ನಡೆಯಿತು.
ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರಿಗೆ ವಿದ್ಯಾರ್ಥಿಗಳ ಪ್ರಶ್ನೆಗಳ ಸುರಿಮಳೆಯನ್ನೇ ಮುಂದಿಟ್ಟಿದ್ದಾರೆ. ನೀವು ಎಫ್ಐಆರ್ ದಾಖಲಿಸದೆ, ತನಿಖೆಯನ್ನೇ ಮಾಡದೆ ಯಾವುದೇ ಸಾಕ್ಷಿ ಇಲ್ಲ. ಮೊಬೈಲ್ ತಪಾಸಣೆ ಮಾಡಿದ್ದೇವೆ ಎಂದು ಹೇಳಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅಷ್ಟೇ ಕೂಲಾಗಿ ಉತ್ತರಿಸಿದ ಅಕ್ಷಯ್ ಮಚ್ಚೀಂದ್ರ, ಈಗಾಗಲೇ ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಿದ್ದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ಆರೋಪಿಗಳ ರಕ್ಷಣೆ ಮಾಡುವುದಿಲ್ಲ. ಮೊಬೈಲ್ ತಪಾಸಣೆ ನಡೆಸಿದ್ದು ಅದರಲ್ಲಿ ಆಕ್ಷೇಪಾರ್ಹ ವಿಡಿಯೋ ಇದೆಯೇ ಎಂದು ಎಫ್ಎಸ್ಎಲ್ ಪರೀಕ್ಷೆ ನಡೆಸಲಾಗುವುದು. ವರದಿಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ವಿದ್ಯಾರ್ಥಿಗಳು ಐಪಿಎಸ್ ಅಧಿಕಾರಿ ಎಂಬುದನ್ನೂ ಲೆಕ್ಕಿಸದೆ ಕೆಣಕುವ ರೀತಿ ಪ್ರಶ್ನೆ ಮಾಡಿದ್ದಾರೆ. ಆದರೆ ವಿದ್ಯಾರ್ಥಿಗಳು ಆಕ್ರೋಶಗೊಳ್ಳಲು ಅವಕಾಶ ನೀಡದೆ ಸಲೀಸಾಗಿ ವ್ಯವಹರಿಸಿ ಪ್ರತಿಭಟನೆ ನಿಲ್ಲಿಸುವಂತೆ ಮನವೊಲಿಸಿದ್ದಾರೆ.
ABVP holds protest over camera in college toilet in Udupi, MLA Yashpal Suvarna gets into the filed to fight for justice.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 08:26 pm
HK News Desk
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm