ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm