ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm