ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm