ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm