ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm