ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.
ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.
ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am