ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm