ಬ್ರೇಕಿಂಗ್ ನ್ಯೂಸ್
01-08-23 07:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಕರಾವಳಿ ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಬೇರೆ ಕಡೆಯ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಪಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಆಡ್ಮಿಷನ್ ಆಗಿದೆ, ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಎಂದು ಹೇಳಿದ್ದರು. ಅಂತಹ ವಾತಾವರಣ ಇಲ್ಲ. ಹಾಗೇನು ಭಯ ಪಡಬೇಡಿ ಅಂತ ವಿದ್ಯಾರ್ಥಿಗಳನ್ನು ಹೇಳಿ. ಕಳುಹಿಸಿದ್ದೆ ಎಂದು ಹೇಳಿದ ಗುಂಡೂರಾವ್, ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸಾಥ್ ನೀಡುತ್ತಿವೆ. ನಮ್ಮ ಸರ್ಕಾರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ.
ಇದನ್ನು ನೈತಿಕ ಪೊಲೀಸ್ ಅಲ್ಲ, ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದು, ದಬ್ಬಾಳಿಕೆ ನಡೆಸೋದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ ಈ ರೀತಿಯ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ.
ಇಂತಹವರಿಗೆ ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಅಂದ್ರೆ, ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರ್ಥ. ಬಿಜೆಪಿಗೆ ದ.ಕ. ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ ಅಂತ ಕಾಣುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮಂಗಳೂರಿಗೆ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಬಳಿಕ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
District-in-charge minister Dinesh Gundu Rao said that several communal forces including Sangh Parivar organisations are deliberately conspiring to bring a bad name to the Dakshina Kannada district.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm