ಬ್ರೇಕಿಂಗ್ ನ್ಯೂಸ್
01-08-23 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಪ್ರೋಟೋಕಾಲ್ ಪ್ರಕಾರ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೆಸರು ಹಾಕದ ಕಾರಣಕ್ಕೆ ಕಾರ್ಯಕ್ರಮ ರದ್ದುಪಡಿಸಿದ್ದಲ್ಲದೆ, ಇರುವೈಲು ಗ್ರಾಮ ಪಂಚಾಯತ್ ಪಿಡಿಓ ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣ ಅಧಿಕಾರಿಯನ್ನು ಅಮಾನತು ಮಾಡಿರುವ ಕ್ರಮವನ್ನು ಆಕ್ಷೇಪಿಸಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನ್ಯಾಯ ಕೇಳಿದ ಪ್ರಸಂಗ ನಡೆದಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಉಮಾನಾಥ ಕೋಟ್ಯಾನ್, ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತದ ಪ್ರೋಟೋಕಾಲ್ ಪ್ರಕಾರವೇ ಮುದ್ರಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರ ಹೆಸರನ್ನೂ ಹಾಕಲಾಗಿತ್ತು. ಆದರೆ, ಎರಡು ದಿನ ಇರುವಾಗ ಕಾರ್ಯಕ್ರಮ ರದ್ದುಪಡಿಸಿದ್ದಲ್ಲದೆ ಇಬ್ಬರು ಅಧಿಕಾರಿಗಳನ್ನು ಜಿಪಂ ಸಿಇಓ, ವಿನಾಕಾರಣ ಸಸ್ಪೆಂಡ್ ಮಾಡಿದ್ದಾರೆ ಎಂದರು. ಇದಕ್ಕೆ ಆಕ್ಷೇಪಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ಗಮನಕ್ಕೆ ವಿಷಯದ ವಿವರಣೆ ನೀಡಿದರು.
ಆದರೆ, ಈ ಬಗ್ಗೆ ಇತರೇ ಬಿಜೆಪಿ ಶಾಸಕರು ಆಕ್ಷೇಪ ಸೂಚಿಸಿದ್ದಲ್ಲದೆ, ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು. ಯಾಕಾಗಿ ಇಬ್ಬರನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ವಿವರಣೆ ಕೊಡಬೇಕು ಎಂದು ಉಮಾನಾಥ ಕೋಟ್ಯಾನ್ ಕೇಳಿಕೊಂಡರು. ಮುಖ್ಯಮಂತ್ರಿ ಜಿಲ್ಲಾಧಿಕಾರಿಯನ್ನು ಪ್ರಶ್ನೆ ಮಾಡಿದ್ದು, ಪ್ರೋಟೋಕಾಲ್ ಮೀರದಂತೆ ಸೂಚನೆ ನೀಡಿದರು. ಪ್ರೋಟೋಕಾಲ್ ತಪ್ಪು ಮಾಡಿದ್ದರೆ, ಜಿಲ್ಲಾಧಿಕಾರಿಯನ್ನು ಸಸ್ಪೆಂಡ್ ಮಾಡಿ. ಅವರು ಹೇಳಿದ ರೀತಿಯಲ್ಲೇ ಆಮಂತ್ರಣ ಪತ್ರಿಕೆ ಮಾಡಲಾಗಿತ್ತು ಎಂದು ಹೇಳಿ ಪತ್ರಿಕೆಯನ್ನು ಮುಖ್ಯಮಂತ್ರಿಯ ಕೈಗಿತ್ತರು ಉಮಾನಾಥ ಕೋಟ್ಯಾನ್.
ಸಚಿವ ಪ್ರಿಯಾಂಕ ಖರ್ಗೆ ಹೆಸರು ಹಾಕಿಲ್ಲ ಎಂದು ಅಧಿಕಾರಿಗಳನ್ನು ಅಮಾನತು ಮಾಡಬೇಕಿತ್ತೇ.. ರಾಜ್ಯದಲ್ಲಿ 5950 ಗ್ರಾಮ ಪಂಚಾಯತ್ ಗಳಿವೆ. ಎಲ್ಲದಕ್ಕೂ ಸಚಿವರಿಗೆ ಬರುವುದಕ್ಕೆ ಆಗುತ್ತಾ.. ಹಾಗಂತ, ಸಸ್ಪೆಂಡ್ ಮಾಡುವುದಾ.. ಈ ಬಗ್ಗೆ ನಾವು ಶಾಸಕರು ಫೋನ್ ಮಾಡಿ ಕೇಳಿದರೂ, ಜಿಲ್ಲಾಧಿಕಾರಿ, ಸಿಇಓ ಕ್ಯಾರ್ ಮಾಡಿಲ್ಲ. ಕನಿಷ್ಠ ಗೌರವ ಕೊಟ್ಟಿಲ್ಲ ಎಂದು ದೂರಿದರು ಕೋಟ್ಯಾನ್. ಯಾವುದೇ ಪಕ್ಷದ ಶಾಸಕರು ಆದರೂ ಅಧಿಕಾರಿಗಳು ಗೌರವ ಕೊಡಬೇಕು. ಅವರು ಜನರಿಂದ ಆಯ್ಕೆಯಾಗಿ ಬಂದವರು. ಅವರಿಗೆ ಗೌರವ ಕೊಡಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದರು.
ಜುಲೈ 31ರಂದು ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕರ ಸೂಚನೆಯಂತೆ ರದ್ದುಪಡಿಸಲಾಗಿತ್ತು. ಸಚಿವ ಪ್ರಿಯಾಂಕ ಖರ್ಗೆ ಸೂಚನೆ ಪ್ರಕಾರ, ಕಾರ್ಯಕ್ರಮ ರದ್ದು ಮತ್ತು ಇಬ್ಬರು ಅಧಿಕಾರಿಗಳ ಅಮಾನತು ಆಗಿತ್ತು ಎಂದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದರು.
Moodbidri Mla Umanth Kotian slams Congress leaders before CM for suspending PDO and EO for missing Priyank Kharge name in invitation.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am