ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am