ಬ್ರೇಕಿಂಗ್ ನ್ಯೂಸ್
06-11-20 10:18 am Udupi Correspondent ಕರಾವಳಿ
ಉಡುಪಿ, ನವೆಂಬರ್ 06 : 'ಸಿದ್ದರಾಮಯ್ಯನಿಗೆ ಹುಚ್ಚು' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಸಂಜೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಅವರನ್ನು ಮಾಧ್ಯಮದ ಮಂದಿ ಮಾತಿಗೆಳೆದರು. ಸಿದ್ದರಾಮಯ್ಯ, ಸಿಎಂ ಬದಲಾವಣೆ ಆಗುತ್ತೆ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ ಗರಂ ಆದ ಈಶ್ವರಪ್ಪ, ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ. ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ.
ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು, ಸಿದ್ದರಾಮಯ್ಯನಿಗೆ ಇಂತಹ ಸುದ್ದಿಗಳೇನು ಆಕಾಶದಿಂದ ಉದುರಿ ಬಿತ್ತಾ? ಮೋದಿ, ನಡ್ಡಾ, ಅಮಿತ್ ಶಾ ಅವರೇನಾದರೂ ಫೋನ್ ಮಾಡಿ ಹೇಳಿದ್ರಾ..? ನಾನು ದೇವಸ್ಥಾನದಲ್ಲಿ ಇದೀನಿ. ಇಲ್ಲದಿದ್ದರೆ ಸಿದ್ದರಾಮಯನಿಗೆ ಇನ್ನೂ ಕೆಟ್ಟಪದ ಬಳಸ್ತಿದ್ದೆ. ಸಿದ್ದರಾಮಯ್ಯ ಇಂತಹ ಸುದ್ದಿಗಳನ್ನು ಹರಡುವುದನ್ನು ಬಿಟ್ಟು ಜನರ ಮಧ್ಯೆ ಹೋಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

'ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಪ್ರೇರಿತ ಕೃತ್ಯ' ಎಂಬ ಸಿದ್ಧರಾಮಯ್ಯ ಮಾತಿಗೆ ತಿರುಗೇಟು ನೀಡಿದ ಈಶ್ವರಪ್ಪ, ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಿದ್ದರೆ ಕಾಂಗ್ರೆಸ್ ಪಕ್ಷ ಕೊಲೆಗಳಿಗೆ ಬೆಂಬಲ ಕೊಡುತ್ತಾ.. ಹಾಗಂತ ಸಿದ್ದರಾಮಯ್ಯ ಒಪ್ಪಿಕೊಂಡು ಬಿಡಲಿ, ನಮ್ಮ ಪಕ್ಷದ ಅನೇಕರನ್ನು ಕಾಂಗ್ರೆಸ್ ಸರ್ಕಾರ ಜೈಲಿಗೆ ಕಳಿಸಿದ್ದು ಕೂಡ ರಾಜಕೀಯ ಪ್ರೇರಿತ ಕೃತ್ಯವೇ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧ ಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ, ತಪ್ಪಿತಸ್ಥ ಅಲ್ಲದಿದ್ದರೆ ವಿನಯ ಕುಲಕರ್ಣಿ ಬಿಡುಗಡೆಯಾಗಿ ಹೊರಗೆ ಬರಲಿ ಎಂದರು. ಅಲ್ಲದೆ, ಕಾಂಗ್ರೆಸ್ ನಾಯಕರ ಸರ್ಕಾರದ ಪ್ರತಿ ನಡೆಯನ್ನು ವಿರೋಧಿಸುವ ಧೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.
Udupi Eshwarappa calls Siddaramaiah mad person. Eshwarappa lashed out during his visit to Udupi temple.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm