ಬ್ರೇಕಿಂಗ್ ನ್ಯೂಸ್
09-08-23 03:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಪತಿಯೇ ಕಳವುಗೈದು ಮಾರಾಟ ಮಾಡಿದ್ದಾರೆಂದು ಪತ್ನಿಯೇ ನಗರದ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪತಿ ಇಲ್ಯಾಸ್ ಮತ್ತು ಪ್ರಭಾಕರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪತಿ ಮತ್ತು ಪತ್ನಿ ನಡುವೆ ಕೆಲವು ತಿಂಗಳಿನಿಂದ ವಿರಸ ಉಂಟಾಗಿದ್ದು ಇತ್ತೀಚೆಗೆ ಎಪ್ರಿಲ್ ತಿಂಗಳಲ್ಲಿ ಜಗಳ ನಡೆದು ಪತ್ನಿ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದರು. ಗಂಡನ ಮನೆ ಕದ್ರಿ ಕೆಪಿಟಿ ಬಳಿಯ ಆಶಿಯಾನ ಅಪಾರ್ಟ್ಮೆಂಟ್ ನಲ್ಲಿತ್ತು. ಆದರೆ, ಮದುವೆಯ ಸಂದರ್ಭದಲ್ಲಿ ತಾಯಿ ಮನೆಯಿಂದ ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದ ಚಿನ್ನಾಭರಣವನ್ನು ಫ್ಲಾಟಿನ ಕಪಾಟಿನಲ್ಲೇ ಇರಿಸಿದ್ದರು. ಒಟ್ಟು 75 ಪವನ್ ಚಿನ್ನವಿದ್ದು, ಈ ವಿಷಯ ಮಹಿಳೆ ಮತ್ತು ಅವರ ಗಂಡನಾದ ಇಲಿಯಾಸ್ಗೆ ಮಾತ್ರ ತಿಳಿದಿತ್ತು.
ಇತ್ತೀಚೆಗೆ ಫ್ಲ್ಯಾಟ್ಗೆ ಹೋಗಿ ವಾಚ್ಮ್ಯಾನ್ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್ಗೆ ಬಂದಿಲ್ಲ ಎಂದು ತಿಳಿಸಿದ್ದರು. ಮಹಿಳೆ ಅನುಮಾನಗೊಂಡು ಮನೆಯೊಳಗೆ ಹೋಗಿ ಬಂಗಾರವಿಟ್ಟ ಕಪಾಟಿನಲ್ಲಿ ನೋಡಿದಾಗ ಲಾಕರ್ ಸಮೇತ ಚಿನ್ನ ಮಾಯವಾಗಿತ್ತು. ಗಂಡನಿಗೆ ಕರೆ ಮಾಡಿದಾಗ 'ನಾನು ಲಾಕರ್ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನೀನು ಏನ್ಮಾಡ್ತೀಯಾ ಎಂದು ದಮ್ಕಿ ಹಾಕಿದ್ದ. ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದಿದ್ದಾಗಿ ಹೇಳಿದ್ದ. ಅದಕ್ಕೆ ಬಡ್ಡಿ ಕಟ್ಟಲಾಗದೇ ಪ್ರಭಾಕರ್ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಹೇಳಿರುವುದಾಗಿ ತಿಳಿಸಿದ್ದ.
ಅಡವಿಟ್ಟ ಚಿನ್ನದ ಬಗ್ಗೆ ಬ್ಯಾಂಕಿನಲ್ಲಿ ಪರಿಶೀಲನೆ ನಡೆಸಿದಾಗ, ಪ್ರಭಾಕರ್ ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಚಿನ್ನ ಕಳಕೊಂಡ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
A wife has filed a complaint with the police against her husband for stealing 75 grams of gold that was kept in a locker. Renisha Noronha is the complainant and her husband Mohammed Ilyas is the accused.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm