ಬ್ರೇಕಿಂಗ್ ನ್ಯೂಸ್
10-08-23 03:17 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 10: ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.
ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡಿದರು.
ಇನ್ನು ಕಾಲೇಜಿಗೆ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜುಲೈ 18ರಂದು ನಡೆದ ಘಟನೆಯ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ, ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿಯ ಹೇಳಿಕೆಗಳನ್ನು ಸಿಐಡಿ ತಂಡ ದಾಖಲಿಸಿಕೊಂಡಿದೆ.
ಸಿಐಡಿ ತನಿಖೆ ವೇಳೆ ಕಾಣಿಸಿಕೊಂಡ ಪ್ಲ್ಯಾಸ್ಟಿಕ್ ಗೊಂಬೆ ಗಮನ ಸೆಳೆಯಿತು. ಕಾಲೇಜಿಗೆ ಗೊಂಬೆಯನ್ನು ತಂದು ಪ್ರಕರಣವನ್ನು ಸಿಐಡಿ ತಂಡ ಮರು ಸೃಷ್ಟಿ ಮಾಡಿತು. ಘಟನೆ ನಡೆದ ಶೌಚಾಲಯ, ಕಾಲೇಜಿನ ವರಾಂಡಾದಲ್ಲಿ ಮಹಜರು ಪ್ರಕ್ರಿಯೆ ನಡೆಸಲು ಗೊಂಬೆಯನ್ನು ಬಳಸಿಕೊಳ್ಳಲಾಯಿತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಡಿವೈಎಸ್ಪಿ ಅಂಜುಮಾಲಾ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ತನಿಖಾ ಪ್ರಕ್ರಿಯೆ ನಡೆಯಿತು.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿತ್ತು. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಸಿಐಡಿ ತಂಡ ನಗರಕ್ಕೆ ಭೇಟಿ ನೀಡಿದೆ.
ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ದ್ವಿತೀಯ ಪಿಯುಸಿಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಥಮ ಪಿಯುಸಿಯ ಹಿಂದು ವಿದ್ಯಾರ್ಥಿನಿಯೊಬ್ಬಳ ಟಾಯ್ಲೆಟ್ ಬಳಕೆಯ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂಬ ವಿವಾದ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
Udupi toilet video case, CID ADGP Manish says we are waiting for FSL Report from the team.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm