ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm