ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am