ಬ್ರೇಕಿಂಗ್ ನ್ಯೂಸ್
10-08-23 10:21 pm Mangalore Correspondent ಕರಾವಳಿ
ಉಡುಪಿ, ಆಗಸ್ಟ್ 10: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಜೊತೆಗೆ ಮಹಿಳೆಯೊಬ್ಬರ ಜೊತೆಗೆ ಸಂಬಂಧ ಇದೆಯೆಂದು ವದಂತಿ ಹಬ್ಬಿತ್ತು. ಅಲ್ಲದೆ, ಆರೋಪಿತ ಮಹಿಳೆಯ ಫೋಟೋವನ್ನು ಕೆಲವು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು. ಗಂಡನೇ ತನ್ನ ಪತ್ನಿ ಜೊತೆಗೆ ಸಂಸದರು ಸಂಬಂಧ ಇಟ್ಟುಕೊಂಡಿದ್ದಾರೆಂದು ಹೇಳಿಕೆ ನೀಡಿದ್ದರಿಂದ ಸುದ್ದಿಗೆ ರೆಕ್ಕೆ ಪುಕ್ಕ ಬಂದಿತ್ತು. ಘಟನೆ ಬಗ್ಗೆ ಸಂತ್ರಸ್ತ ಮಹಿಳೆ ತನ್ನ ವಿರುದ್ಧ ಕೆಲವರು ಸೇರಿ ತೇಜೋವಧೆ ಮಾಡಿದ್ದಾರೆಂದು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಮಂಗಳೂರಿನ ವಕೀಲ ರಾಘವೇಂದ್ರ ರಾವ್ ಮತ್ತು ಸತೀಶ್ ಶೆಟ್ಟಿ ಎಂಬವರು ಆರೋಪಿಗಳಾಗಿದ್ದರು. ಇದೀಗ ತಮ್ಮ ಮೇಲಿನ ಪ್ರಕರಣ ರದ್ದು ಪಡಿಸಬೇಕೆಂದು ರಾಘವೇಂದ್ರ ರಾವ್, ಉಡುಪಿ ಜಿಲ್ಲಾ ಸೆಷನ್ಸ್ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಸಕಾರಣ ಇಲ್ಲದಿದ್ದರೂ ದುರುದ್ದೇಶದಿಂದ ಚಾರ್ಜ್ ಶೀಟ್ ಹಾಕಲಾಗಿದೆ. ವಾಟ್ಸಪ್ ಮೆಸೇಜ್ ಆಧಾರದಲ್ಲಿ ತನ್ನ ಮೇಲೆ ಆರೋಪ ಹೊರಿಸಿದ್ದು ಸರಿಯಲ್ಲ ಇತ್ಯಾದಿ ಕಾರಣಗಳನ್ನು ಮುಂದಿಟ್ಟು ತನ್ನ ವಿರುದ್ಧದ ಕೇಸು ವಜಾಗೊಳಿಸುವಂತೆ ರಾಘವೇಂದ್ರ ರಾವ್ ಅರ್ಜಿ ಹಾಕಿದ್ದರು.
ಆದರೆ ನೀಡಿರುವ ಕಾರಣಗಳನ್ನು ಮುಂದಿಟ್ಟು ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅಲ್ಲದೆ, ಕೆಳಗಿನ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶಾಂತವೀರ ಶಿವಪ್ಪ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಮಾನಹಾನಿ ಸೇರಿದಂತೆ ಐಟಿ ಆಕ್ಟ್ ನಡಿ ಕೇಸು ದಾಖಲಾಗಿತ್ತು.
Nalin Kateel affair news, Mangalore Senior lawyer Raghavendra Rao application to cancel case rejected by Udupi court. Advocate Raghavendra Rao had made false propaganda of Nalin Kateel having affair with some other married women, after which the women filed a case in 2014.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm