ಬ್ರೇಕಿಂಗ್ ನ್ಯೂಸ್
11-08-23 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಹಳೆಯಂಗಡಿ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ ವಿಚಾರ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿಗೆ ಕಾರಣವಾಗಿತ್ತು. ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆಸಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸುವಂತಾಗಿತ್ತು.
ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್ ಗಳಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಹಾಗೂ ಬಿಜೆಪಿ ಬೆಂಬಲಿತ 11 ಸದಸ್ಯರು ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲದಿಂದಾಗಿ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರ ಪಟ್ಟ ಒಲಿದು ಬಂದಿತ್ತು. ಈ ಬಾರಿ ಅಧ್ಯಕ್ಷ ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಭ್ರಷ್ಟಾಚಾರ ಆರೋಪದ ಕಾರಣ ಸದಸ್ಯತ್ವ ರದ್ದುಗೊಂಡಿರುವುದು ಜಟಾಪಟಿಗೆ ಕಾರಣ.




ಕೋರ್ಟ್ ತೀರ್ಪಿನ ಪ್ರಕಾರ ಆ ಮಹಿಳೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ನಾಯಕರು ವಾದಿಸಿದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೆಸ್ ಕಾರ್ಯಕರ್ತರ ವಾದವಾಗಿತ್ತು. ಇದರಿಂದ ಚುನಾವಣೆ ನಡೆಸಲಾಗದೆ ಸ್ಥಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಜಮಾಯಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.




ಮಧ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆದು 1 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆದಿರಲಿಲ್ಲ. ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರನ್ನು ಹೊರಗಿಟ್ಟು, ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಬಿಜೆಪಿ ಬೆಂಬಲಿತ ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಇವರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದು ಕಾಂಗ್ರೆಸ್ ಬೆಂಬಲಿತರು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಮಧ್ಯಾಹ್ನದಿಂದಲೇ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಿಥುನ್ ರೈ ಸ್ಥಳದಲ್ಲಿ ಇದ್ದುದರಿಂದ ಎರಡೂ ಕಡೆ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು. ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದು ಜನರನ್ನು ಚದುರಿಸಿದ್ದಾರೆ.
Fight between Congress and BJP near Haleyangadi panchyath over election's in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am