ಬ್ರೇಕಿಂಗ್ ನ್ಯೂಸ್
11-08-23 10:57 pm Mangalore Correspondent ಕರಾವಳಿ
ಉಳ್ಳಾಲ, ಆ.11: ಮಂಗಳೂರು ವಿವಿಯ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ 34 ವರ್ಷಗಳಿಂದ(1989 ರಿಂದ) ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾದ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್ಡಿ ಪದವಿ ಪಡೆದುಕೊಂಡಿದ್ದಾರೆ.
ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ, ಟಿಪ್ಪು- ಹೈದರಾಲಿ ಇತಿಹಾಸ ಕಥನ, ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ, ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು ಉದಯ್ ಬಾರ್ಕೂರು ಪ್ರಕಟಿಸಿದ್ದಾರೆ.
ಮೃತರು ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಉದಯ್ ಬಾರ್ಕೂರು ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Mangalore Univercity professor Uday Barkur (59) dies of heart attack.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm