ಬ್ರೇಕಿಂಗ್ ನ್ಯೂಸ್
12-08-23 07:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸರಕಾರವನ್ನು ಟೀಕಿಸಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Mangalore DYFI salms at MESCOM for regular power cuts in the city after Gruha Jyothi being introduced in state.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm