ಬ್ರೇಕಿಂಗ್ ನ್ಯೂಸ್
12-08-23 07:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸರಕಾರವನ್ನು ಟೀಕಿಸಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Mangalore DYFI salms at MESCOM for regular power cuts in the city after Gruha Jyothi being introduced in state.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm