ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm