ಬ್ರೇಕಿಂಗ್ ನ್ಯೂಸ್
13-08-23 08:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಿಷೇಧಿತ ಪಿಎಫ್ಐ ಸಂಘಟನೆಗೆ ಫಂಡಿಂಗ್ ಮಾಡಿರುವ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಳ್ಳಾಲದ ಕಿನ್ಯಾ, ಮಂಗಳೂರು ಹೊರವಲಯದ ವಳಚ್ಚಿಲ್ ಪದವು ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲದ ಕಿನ್ಯಾದಲ್ಲಿ ಕೇರಳದ ಮೂಲದ ಇಬ್ರಾಹಿಂ ಎಂಬ ಧಾರ್ಮಿಕ ಶಿಕ್ಷಕರೊಬ್ಬರ ಮನೆಗೆ ದಾಳಿ ನಡೆಸಿದ್ದು, ಮನೆಯಲ್ಲಿದ್ದ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಒಂದು ವರ್ಷದ ಹಿಂದೆ ಪಿಎಫ್ಐ ಸಂಘಟನೆ ನಿಷೇಧ ಬೆನ್ನಲ್ಲೇ ನಾಪತ್ತೆಯಾಗಿದ್ದರು. ನಿಷೇಧ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್ಐ ನಾಯಕರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧರಿಸಿ ಇಬ್ರಾಹಿಂ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದೀಗ ಆತನ ಮನೆಯಲ್ಲಿ ತಲಾಶ್ ನಡೆಸಿದ್ದಾರೆ.

ಪಿಎಫ್ಐ ಪರವಾಗಿ ಫಂಡಿಂಗ್ ನಡೆಸುತ್ತಿರುವ ಹವಾಲಾ ನೆಟ್ವರ್ಕ್ ನಲ್ಲಿ ಇಬ್ರಾಹಿಂ ಲಿಂಕ್ ಹೊಂದಿದ್ದಾನೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ವಳಚ್ಚಿಲ್ ಪದವು ನಿವಾಸಿ ಮುಸ್ತಾಕ್ ಮತ್ತು ಮೆಲ್ಕಾರ್ ನಲ್ಲಿ ಇಬ್ರಾಹಿಂ ನಂದಾವರ ಎಂಬವರ ಮನೆಗೂ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿಗಳಿವೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ.
NIA riads three places of Mangalore in Ullal, Valachil and Melkar over PFI funding network. A regious teacher house was also raided by NIA at Ullal. The Raid was conducted suspecting Hawala Network.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm