ಬ್ರೇಕಿಂಗ್ ನ್ಯೂಸ್
15-08-23 06:49 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದಿದ್ದ 17 ವರ್ಷದ ಬಾಲಕ ಶಸ್ತ್ರಚಿಕಿತ್ಸೆ ಬಳಿಕ ಗಂಭೀರ ಸ್ಥಿತಿಗೊಳಗಾಗಿ ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಬಾಲಕನ ಸಂಬಂಧಿಕರು, ಸಾರ್ವಜನಿಕರು ಸೇರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಸುಳ್ಯ ತಾಲೂಕಿನ ಶಾಂತಿನಗರ ನಿವಾಸಿ ಸೃಜಿತ್(17) ಮೃತ ಬಾಲಕ. ಮೊನ್ನೆ ಶನಿವಾರ ಸಂಜೆ ಹೊಟ್ಟೆ ನೋವು ಕಾರಣಕ್ಕೆ ಈತನನ್ನು ಪುತ್ತೂರಿನ ಚೇತನಾ ಆಸ್ಪತ್ರೆಗೆ ಕರೆತರಲಾಗಿತ್ತು. ಹೊಟ್ಟೆಯ ಕರುಳು ಒಂದಕ್ಕೊಂದು ಸೇರಿಕೊಂಡಿದೆ, ಶಸ್ತ್ರಚಿಕಿತ್ಸೆ ಆಗಬೇಕೆಂದು ವೈದ್ಯರು ಸೂಚಿಸಿದ್ದರು. ಅದರಂತೆ, ಮರುದಿನ ಭಾನುವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ಬಾಲಕನಿಗೆ ವಿಪರೀತ ಕೆಮ್ಮು ಉಂಟಾಗಿದ್ದು, ವೈದ್ಯರು ಸಕಾಲದಲ್ಲಿ ಸ್ಪಂದಿಸದ ಕಾರಣ ಉಸಿರಾಟದ ಸಮಸ್ಯೆ ಎದುರಾಗಿತ್ತು.



ನಡು ರಾತ್ರಿ ವೇಳೆ ಕೂಡಲೇ ಮಂಗಳೂರಿಗೆ ಕರೆದೊಯ್ಯಬೇಕು, ಇಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲವೆಂದು ವೈದ್ಯರು ಹೇಳಿದ್ದರಿಂದ ಬಾಲಕನನ್ನು ಸೋಮವಾರ ಬೆಳಗ್ಗಿನ ಹೊತ್ತಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ತರಲಾಗಿತ್ತು. ಅಲ್ಲಿ ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಇದರಿಂದ ಪುತ್ತೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ ತಿರುಗಿದ್ದು, ಮಂಗಳವಾರ ಮಧ್ಯಾಹ್ನದಿಂದಲೇ ಚೇತನಾ ಆಸ್ಪತ್ರೆಯ ಮುಂದೆ ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಲ್ಲಿ ವೈದ್ಯರನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ.
ಬಳಿಕ ಪುತ್ತೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು, ಚೇತನಾ ಆಸ್ಪತ್ರೆಯಲ್ಲಿ ಈ ಹಿಂದೆಯೂ ಇದೇ ರೀತಿ ಎಡವಟ್ಟು ಆಗಿತ್ತು. ವೆಂಟಿಲೇಟರ್ ಇತ್ಯಾದಿ ವ್ಯವಸ್ಥೆ ಇಲ್ಲದೆ ಶಸ್ತ್ರಚಿಕಿತ್ಸೆ ನಡೆಸಿದ್ದು ಯಾಕೆ, ಎಡವಟ್ಟು ಮಾಡಿರುವ ವೈದ್ಯರನ್ನು ಬಂಧಿಸಬೇಕು. ಕೂಡಲೇ ಕ್ರಮ ಜರುಗಿಸಬೇಕೆಂದು ಆಗ್ರಹ ಮಾಡಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸುತ್ತಾರೆಂದು ತಹಸೀಲ್ದಾರ್ ಸಮಜಾಯಿಷಿ ನೀಡಿದ್ದಾರೆ.
17 year old youth dies after doctors negligence during operation in Sullia, protest held holding dead body.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am