ಬ್ರೇಕಿಂಗ್ ನ್ಯೂಸ್
15-08-23 06:49 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದಿದ್ದ 17 ವರ್ಷದ ಬಾಲಕ ಶಸ್ತ್ರಚಿಕಿತ್ಸೆ ಬಳಿಕ ಗಂಭೀರ ಸ್ಥಿತಿಗೊಳಗಾಗಿ ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಬಾಲಕನ ಸಂಬಂಧಿಕರು, ಸಾರ್ವಜನಿಕರು ಸೇರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಸುಳ್ಯ ತಾಲೂಕಿನ ಶಾಂತಿನಗರ ನಿವಾಸಿ ಸೃಜಿತ್(17) ಮೃತ ಬಾಲಕ. ಮೊನ್ನೆ ಶನಿವಾರ ಸಂಜೆ ಹೊಟ್ಟೆ ನೋವು ಕಾರಣಕ್ಕೆ ಈತನನ್ನು ಪುತ್ತೂರಿನ ಚೇತನಾ ಆಸ್ಪತ್ರೆಗೆ ಕರೆತರಲಾಗಿತ್ತು. ಹೊಟ್ಟೆಯ ಕರುಳು ಒಂದಕ್ಕೊಂದು ಸೇರಿಕೊಂಡಿದೆ, ಶಸ್ತ್ರಚಿಕಿತ್ಸೆ ಆಗಬೇಕೆಂದು ವೈದ್ಯರು ಸೂಚಿಸಿದ್ದರು. ಅದರಂತೆ, ಮರುದಿನ ಭಾನುವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಸಂಜೆಯಾಗುತ್ತಿದ್ದಂತೆ ಬಾಲಕನಿಗೆ ವಿಪರೀತ ಕೆಮ್ಮು ಉಂಟಾಗಿದ್ದು, ವೈದ್ಯರು ಸಕಾಲದಲ್ಲಿ ಸ್ಪಂದಿಸದ ಕಾರಣ ಉಸಿರಾಟದ ಸಮಸ್ಯೆ ಎದುರಾಗಿತ್ತು.



ನಡು ರಾತ್ರಿ ವೇಳೆ ಕೂಡಲೇ ಮಂಗಳೂರಿಗೆ ಕರೆದೊಯ್ಯಬೇಕು, ಇಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲವೆಂದು ವೈದ್ಯರು ಹೇಳಿದ್ದರಿಂದ ಬಾಲಕನನ್ನು ಸೋಮವಾರ ಬೆಳಗ್ಗಿನ ಹೊತ್ತಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ತರಲಾಗಿತ್ತು. ಅಲ್ಲಿ ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಇದರಿಂದ ಪುತ್ತೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ ತಿರುಗಿದ್ದು, ಮಂಗಳವಾರ ಮಧ್ಯಾಹ್ನದಿಂದಲೇ ಚೇತನಾ ಆಸ್ಪತ್ರೆಯ ಮುಂದೆ ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಲ್ಲಿ ವೈದ್ಯರನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ.
ಬಳಿಕ ಪುತ್ತೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು, ಚೇತನಾ ಆಸ್ಪತ್ರೆಯಲ್ಲಿ ಈ ಹಿಂದೆಯೂ ಇದೇ ರೀತಿ ಎಡವಟ್ಟು ಆಗಿತ್ತು. ವೆಂಟಿಲೇಟರ್ ಇತ್ಯಾದಿ ವ್ಯವಸ್ಥೆ ಇಲ್ಲದೆ ಶಸ್ತ್ರಚಿಕಿತ್ಸೆ ನಡೆಸಿದ್ದು ಯಾಕೆ, ಎಡವಟ್ಟು ಮಾಡಿರುವ ವೈದ್ಯರನ್ನು ಬಂಧಿಸಬೇಕು. ಕೂಡಲೇ ಕ್ರಮ ಜರುಗಿಸಬೇಕೆಂದು ಆಗ್ರಹ ಮಾಡಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸುತ್ತಾರೆಂದು ತಹಸೀಲ್ದಾರ್ ಸಮಜಾಯಿಷಿ ನೀಡಿದ್ದಾರೆ.
17 year old youth dies after doctors negligence during operation in Sullia, protest held holding dead body.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm