ಬ್ರೇಕಿಂಗ್ ನ್ಯೂಸ್
16-08-23 10:54 am Mangalore Correspondent ಕರಾವಳಿ
ಮಂಗಳೂರು, ಆ.16: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿದ್ದು ಪುತ್ರ ಶೋಕದಲ್ಲಿದ್ದ ತಂದೆಯೂ ಆತ್ಮಹತ್ಯೆಗೈದಿದ್ದಾರೆ.
ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು,ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು. ಆ.13 ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ರವರು ಮೊಬೈಲ್ ಮೂಲಕ ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ "ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು" ನಾನು ಮೊಬೈಲ್ ಕೊಂಡು ಹೋಗುವುದಿಲ್ಲ. ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.
ವಾಟ್ಸಪ್ ಸಂದೇಶ ಕೇಳಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ ಲೋಕೇಶ್ ರವರು ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಮಂಗಳವಾರ 11 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.
ಮಗ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.
Mangalore Body of Lokesh (57) year old man from kasargod, Kumble found at Ullal beach after suicide. It is said that Lokesh son committed suicide just a month ago and was depressed.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm