ಬ್ರೇಕಿಂಗ್ ನ್ಯೂಸ್
06-11-20 06:25 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 06: ಕೊರೊನಾ ನಿರ್ಬಂಧಗಳ ನಡುವೆ ನಾಟಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬೇಕೆಂಬ ನಾಟಕ ಕಲಾವಿದರ ಸಂಘದ ಮನವಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ. ಸರಕಾರದ ಮಾರ್ಗಸೂಚಿ ಅನ್ವಯ ನಾಟಕ ಆರಂಭಕ್ಕೆ ಅನುಮತಿ ನೀಡುವುದಾಗಿ ಹೇಳಿದ್ದಾರೆ.
ಕೊರೊನಾ ಕಾರಣದಿಂದ ಕಳೆದೊಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಸ್ಕೃತಿಕ ಮತ್ತು ಜನಪದ ಕಾರ್ಯಕ್ರಮಗಳು ಸಂಪೂರ್ಣ ಸ್ಥಗಿತಗೊಂಡಿತ್ತು. ಹೀಗಾಗಿ ಕಲಾವಿದರಿಗೆ ದೈನಂದಿನ ಜೀವನ ಸಾಗಿಸಲು ಕಷ್ಟವಾಗಿತ್ತು. ಕರಾವಳಿ ಜಿಲ್ಲೆಯಲ್ಲಿ ಸುಮಾರು 50ಕ್ಕಿಂತಲೂ ಹೆಚ್ಚಿನ ವೃತ್ತಿಪರ ನಾಟಕ ತಂಡಗಳಿವೆ. ನಾಟಕಗಳಲ್ಲಿ ದುಡಿಯುವ ಹೆಚ್ಚಿನ ರಂಗ ಕಲಾವಿದರು ಕಲೆಯನ್ನೇ ಜೀವನದ ವೃತ್ತಿಯನ್ನಾಗಿಸಿದ್ದು, ಕಲಾವಿದರಿಗೆ ಬೇರೆ ಆದಾಯದ ಮೂಲಗಳಿರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾಟಕ ಕಲಾವಿದರ ಸಂಘವು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.



ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಸರಕಾರದ ಸುತ್ತೋಲೆಯಂತೆ ಎಲ್ಲಾ ವಿಧದ ಮನೋರಂಜನಾ ಕಾರ್ಯಕ್ರಮಗಳಿಗೆ ಷರತ್ತಿನ ಆಧಾರದಲ್ಲಿ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕರಾವಳಿ ಕರ್ನಾಟಕ ರಂಗ ಕಲಾವಿದರ ಸೇವಾ ಪರಿಷತ್ತು (ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆ) ಅಧ್ಯಕ್ಷ ಮೋಹನ್ ದಾಸ್ ಕೊಟ್ಟಾರಿ ತಿಳಿಸಿದ್ದಾರೆ.
ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕಣ್ಣೂರು, ಗೌರವ ಸಲಹೆಗಾರ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಸ್ಥಾಪಕ ಸದಸ್ಯರು ರಮೇಶ್ ರೈ ಕುಕ್ಕುವಳ್ಳಿ, ಚಿದಾನಂದ ಅದ್ಯಪಾಡಿ, ನ್ಯಾಯವಾದಿ ಮೋಹನ್ ದಾಸ್ ರೈ, ಕೀತ್ ಪುರ್ತಾಡೊ, ಚಲನಚಿತ್ರ ನಿರ್ದೇಶಕ ವಿಶ್ವನಾಥ್ ಕೋಡಿಕಲ್ ಹಾಗೂ ನ್ಯಾಯವಾದಿ ರಿತೇಶ್ ಬಂಗೇರ ಉಪಸ್ಥಿತರಿದ್ದರು.
The Mangalore DC has given permission to hold Drama and Cultural Activities with certain guidelines here on Nov 6, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am