ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm