ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm