ಬ್ರೇಕಿಂಗ್ ನ್ಯೂಸ್
17-08-23 03:36 pm Mangalore Correspondent ಕರಾವಳಿ
ಉಳ್ಳಾಲ, ಆ.17: ವ್ಯಕ್ತಿಯೊಬ್ಬ ಆಹಾರದಲ್ಲಿ ವಿಷವಿಕ್ಕಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆಂದು ಆರೋಪ ಕೇಳಿಬಂದಿದೆ. ವಿಷಾಹಾರ ಸೇವಿಸಿದ ಹಸುವೊಂದು ಸಾವನ್ನಪ್ಪಿದ್ದು ಕೃತ್ಯ ಎಸಗಿದವನ ಬಂಧನಕ್ಕೆ ಸ್ಥಳೀಯರು ಮತ್ತು ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ.
ತಲಪಾಡಿಯ ಅಲಂಕಾರಗುಡ್ಡೆ, ಭಂಡಾರಮನೆ ಬಳಿ ನಿವಾಸಿ ಅಮಿತ ಎಂಬವರು ಸಾಕುತ್ತಿದ್ದ ಹಸುವನ್ನು ವಿಷ ಪ್ರಾಷಣಗೈದು ಕೊಲ್ಲಲಾಗಿದೆ. ಸ್ಥಳೀಯ ನಿವಾಸಿ ಖಾದರ್ ಎಂಬಾತ ಕೃತ್ಯ ನಡೆಸಿದ್ದಾನೆಂದು ಅಮಿತ ಆರೋಪಿಸಿದ್ದಾರೆ. ಖಾದರ್ ಮೇಕೆಗಳನ್ನ ಸಾಕುತ್ತಿದ್ದು ಇತ್ತೀಚೆಗೆ ಆತನ ಮೇಕೆಯೊಂದನ್ನ ನಾಯಿಗಳು ದಾಳಿ ನಡೆಸಿ ಕೊಂದಿದ್ದವು. ಇದರಿಂದ ಕುಪಿತಗೊಂಡ ಖಾದರ್ ಸುತ್ತಮುತ್ತಲ ಬೀದಿ ಮತ್ತು ಸಾಕು ನಾಯಿಗಳಿಗೆ ವಿಷಾಹಾರ ಉಣಿಸಿ ಸುಮಾರು 25 ರಷ್ಟು ನಾಯಿಗಳ ಸಾವಿಗೆ ಕಾರಣವಾಗಿದ್ದಾನೆ. ನಾಯಿಗಳಿಗೆ ವಿಷ ಪ್ರಾಷಣ ಮಾಡಿದ ಬಗ್ಗೆ ಖಾದರ್ ಬಹಿರಂಗವಾಗಿ ಜನರಲ್ಲಿ ಹೇಳಿದ್ದಾಗಿ ಅಮಿತ ಅವರು ಆರೋಪಿಸಿದ್ದಾರೆ. ಇಂದು ಕೂಡ ನಾಯಿಗಳು ವಿಷಾಹಾರ ಸೇವಿಸಿ ವಿಲ ವಿಲ ಒದ್ದಾಡುತ್ತಿರುವ ದೃಶ್ಯ ಮಾಧ್ಯಮದ ಕ್ಯಾಮೆರಾಕ್ಕೆ ಸಿಕ್ಕಿವೆ.




ಅಮಿತ ಅವರು ದನ ಸಾಕಣೆ ಮಾಡುತ್ತಿದ್ದು ನಿನ್ನೆ ಸಂಜೆ ಹಸುವೊಂದನ್ನ ಹುಲ್ಲು ಮೇಯಲು ಮನೆ ಪಕ್ಕದ ದೈವಸ್ಥಾನದ ಬಳಿ ಕಟ್ಟಿ ಹಾಕಿದ್ದರು. ಆರೋಗ್ಯವಾಗಿದ್ದ ಹಸು ನಿನ್ನೆ ರಾತ್ರಿ ನರಳುತ್ತಲೇ ಸಾವನ್ನಪ್ಪಿದೆ. ಪರಿಶೀಲನೆ ನಡೆಸಿದ ಪಶು ವೈದ್ಯರು ಹಸು ವಿಷಾಹಾರ ಸೇವಿಸಿ ಸತ್ತಿರುವುದಾಗಿ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಭೇಟಿ ನೀಡಿದ್ದು ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿ ಕೃತ್ಯ ಎಸಗಿದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ತಲಪಾಡಿ ಗ್ರಾ.ಪಂ ಪಿಡಿಒ ಮತ್ತು ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿಯಲ್ಲಿ ಆಗ್ರಹಿಸಿದ್ದಾರೆ.
ಜಾನುವಾರುಗಳನ್ನ ವಿಷ ಪ್ರಾಷಣಗೈದು ಕೊಂದ ಶಂಕಿತ ಆರೋಪಿ ಖಾದರ್ ಈ ಹಿಂದೆ ಗಂಧ ಕಳ್ಳ ಸಾಗಣೆಯಲ್ಲಿ ತೊಡಗಿದ್ದು, ಸ್ಥಳೀಯ ಮಹಿಳೆಯರಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
Carcasses of 25 stray dogs found in Talapady in Mangalore, suspect poisoning. The incident was brought to light by animal rights activists who spotted the remains.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm