ಬ್ರೇಕಿಂಗ್ ನ್ಯೂಸ್
17-08-23 09:28 pm Mangalore Correspondent ಕರಾವಳಿ
ಉಳ್ಳಾಲ, ಆ.17: ಉಳ್ಳಾಲ ಬೀಚಲ್ಲಿ ರಾಶಿ ಬಿದ್ದಿದ್ದ ತ್ಯಾಜ್ಯದ ಕೊಂಪೆಯನ್ನ ಜನಾಕ್ರೋಶದ ಮೇರೆಗೆ ಉಳ್ಳಾಲ ನಗರಸಭೆ ಆಡಳಿತವು ಕಡೆಗೂ ತರಾತುರಿಯಲ್ಲಿ ತೆರವುಗೊಳಿಸಿತ್ತು. ಇದೀಗ ನಗರಸಭಾ ಕಚೇರಿ ಮುಂದಿನ ಮಹಾತ್ಮ ಗಾಂಧಿ ರಂಗ ಮಂಟಪದಲ್ಲೇ ತ್ಯಾಜ್ಯವನ್ನ ವಿಂಗಡಣೆ ಮಾಡುತ್ತಿದ್ದಾರೆ. ಇದರಿಂದಾಗಿ ಉಳ್ಳಾಲದ ಹೃದಯ ಭಾಗ ಗಬ್ಬೆದ್ದು ನಾರುತ್ತಿದ್ದು ವಾಸನೆ ಗ್ರಹಿಸಲು ನಗರಸಭೆ ಪೌರಾಯುಕ್ತೆ ವಾಣಿ ಆಳ್ವರಿಗೆ ಮೂಗಿಲ್ಲದಾಯ್ತೇ ಎಂಬ ಪ್ರಶ್ನೆ ಮೂಡಿದೆ.
ಉಳ್ಳಾಲ ನಗರದಾದ್ಯಂತ ಸಂಗ್ರಹಿಸಿದ ತ್ಯಾಜ್ಯವನ್ನ ನಗರಸಭೆ ಕಚೇರಿಯ ಮುಂಭಾಗದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಪ್ರತ್ಯೇಕಿಸಿ ಮರು ಲೋಡ್ ಮಾಡಲಾಗುತ್ತಿದೆ. ಈ ಹಿಂದೆ ಅನೇಕ ವರ್ಷಗಳಿಂದ ಉಳ್ಳಾಲ ಬೀಚ್ ರಸ್ತೆ ಬದಿಯಲ್ಲೇ ರಾಶಿಗಟ್ಟಲೆ ತ್ಯಾಜ್ಯವನ್ನ ಸುರಿಯಲಾಗುತ್ತಿತ್ತು. ರೊಚ್ಚಿಗೆದ್ದ ಸ್ಥಳೀಯರು ತ್ಯಾಜ್ಯವನ್ನ ನಗರಸಭೆ ಕಚೇರಿಗೆ ತಂದು ಸುರಿಯಲು ಮುಂದಾದಾಗ ಎಚ್ಚೆತ್ತ ನಗರಸಭೆ ಅಧಿಕಾರಿಗಳು ತರಾತುರಿಯಲ್ಲಿ ತ್ಯಾಜ್ಯವನ್ನು ವಿಲೇವಾರಿಗೊಳಿಸಿ ಪ್ರದೇಶವನ್ನ ಸ್ವಚ್ಛಗೊಳಿಸಿದ್ದರು.



ಈಗ ಬೀಚ್ ರಸ್ತೆ ಬಿಟ್ಟು ತ್ಯಾಜ್ಯ ರಂಗಮಂದಿರಕ್ಕೆ ಶಿಫ್ಟ್ ಆಗಿದೆ. ಇಷ್ಟೊಂದು ವಿಸ್ತೀರ್ಣವುಳ್ಳ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಂಗಡಿಸಲು ಬೇರೆ ಸ್ಥಳವೇ ಸಿಗದಿರೋದು ಹಾಸ್ಯಾಸ್ಪದ ಎಂಬಂತಿದೆ. ಇದಕ್ಕೆ ಅಧಿಕಾರಿ, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣವಾಗಿದೆ.



ಗಬ್ಬೆದ್ದ ರಂಗಮಂದಿರದಲ್ಲಿ ಗಣೇಶೋತ್ಸವ ಸಾಧ್ಯವೇ..?
ಉಳ್ಳಾಲ ವಿದ್ಯಾರಣ್ಯ ಕಲಾವೃಂದದ ವತಿಯಿಂದ ಪ್ರತೀ ವರ್ಷ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಗಣಪತಿಯನ್ನ ಪ್ರತಿಷ್ಟಾಪಿಸಿ ಉತ್ಸವ ನಡೆಸಲಾಗುತ್ತದೆ. ಅದರಂತೆ, ಮುಂದಿನ ತಿಂಗಳಲ್ಲಿ ಇಲ್ಲಿ ಗಣೇಶೋತ್ಸವ ನಡೆಯಬೇಕು. ಆದರೆ, ಈಗಿನ ಸ್ಥಿತಿಯಲ್ಲಿ ಗಣೇಶೋತ್ಸವ ನಡೆಸುವಂತಿಲ್ಲ. ಹೀಗಾಗಿ ಉತ್ಸವ ನಡೆಯಬಾರದೆಂಬ ದೃಷ್ಟಿಯಲ್ಲಿ ಕಾಣದ ಕೈಗಳು ಬೇಕಂತಲೇ ಇಲ್ಲಿ ತ್ಯಾಜ್ಯ ಸುರಿಯುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಆದಷ್ಟು ಬೇಗನೆ ಈ ಪ್ರದೇಶದಲ್ಲಿ ತ್ಯಾಜ್ಯ ವಿಂಗಡನೆ ಕಾರ್ಯ ನಿಲ್ಲಿಸಿ ಗಣೇಶೋತ್ಸವಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದರೆ ನಾವು ನಗರಸಭೆ ವಿರುದ್ಧ ಹೋರಾಟ ನಡೆಸುವುದಾಗಿ ವಿದ್ಯಾರಣ್ಯ ಕಲಾವೃಂದದ ಅಧ್ಯಕ್ಷರಾದ ವಿಜಯ ಕುಮಾರ್ ತಿಳಿಸಿದ್ದಾರೆ.
Mangalore Ullal municipal corporations turns into Garbage dumpyard.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm